Tagged: Kannada

ಹಣಕಾಸು ಸಚಿವರಿಂದ ಪದಕ ಪಡೆದ ಕುಡ್ಲದ ಮಿಶೆಲ್ !

ಕುಡ್ಲದ ನೀರುಡೆ ಕಲ್ಲಮುಂಡ್ಕೂರಿನ ಮಿಶೆಲ್ ಕ್ವೀನಿ ಡಿಕೋಸ್ತಾ ಅವರ ಕೆಲಸವನ್ನು ನೋಡಿ ಕೇಂದ್ರದ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಪದಕ ನೀಡಿ ಗೌರವಿಸಿದ್ದಾರೆ.

ಅರೇ ಯಾರಿದು ಮಿಶೆಲ್ ಎನ್ನುತ್ತೀರಾ..? ಮಿಶೆಲ್ ನೀರುಡೆಯ ಕಲ್ಲಮುಂಡ್ಕೂರಿನ ಲಾಜರಸ್ ಡಿ ಕೋಸ್ತಾ ಮತ್ತು ನ್ಯಾನ್ಸಿ ಡಿ ಕೋಸ್ತಾ ದಂಪತಿಗಳ ಎರಡನೇ ಮಗಳು. ಮೂಲತಃ ಕೃಷಿ ಕುಟುಂಬದಿಂದ ಬೆಳೆದು ಬಂದ ಹುಡುಗಿ ಮಿಶೆಲ್ 2015ರಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ 387ನೇ ರ‍್ಯಾಂಕ್‌ಗಳಿಸಿಕೊಂಡು ನಾಗರಿಕ ಸೇವೆಯಲ್ಲಿ ಐಆರ್‌ಎಸ್ ಮಾಡುತ್ತಿದ್ದಾರೆ.

ಇದರ ಪಾಸಿಂಗ್ ಔಟ್ ಕಾರ‍್ಯಕ್ರಮದಲ್ಲಿ ವಿಶೇಸ ಸಾಧನೆ ಮಾಡಿದ ಮಿಶೆಲ್‌ಗೆ ಖುದ್ದು ಹಣಕಾಸು ಸಚಿವರು ಪದಕ ನೀಡಿ ಗೌರವಿಸಿದ್ದಾರೆ. ಇದು ಕುಡ್ಲದ ಪ್ರತಿಯೊಬ್ಬ ಹೆಣ್ಣು ಮಗಳು ಸಾಧನೆಗೆ ಸಂದ ಗೆಲುವು ಎನ್ನಬೇಕು. ಮಿಶೆಲ್ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿ ಮುಗಿಸಿದವರು.

ಶಂಕರಪುರ ಮಲ್ಲಿಗೆ ರೇಟ್ ಭರ್ಜರಿ !

ಸುಗಂಧಯುಕ್ತ ಶ್ವೇತಪುಷ್ಪ ಶಂಕರಪುರ ಮಲ್ಲಿಗೆಗೆ ಈಗ ಚಿನ್ನದ ಬೆಲೆ ಬಂದಿದೆ. ಕಳೆದ 6 ದಿನಗಳಲ್ಲಿ 4 ಬಾರಿ ಕಟ್ಟೆಯ ಗರಿಷ್ಠ ಬೆಲೆ 1250 ರೂ. ತಲುಪಿದೆ.ವಾಡಿಕೆಗಿಂತ ಅತಿಯಾಗಿ ಸುರಿದ ನಿರಂತರ ಮಳೆಯಿಂದಾಗಿಮಲ್ಲಿಗೆ ಇಳುವರಿಯಲ್ಲಾದ ಕೊರತೆಯಿಂದ ಬೇಡಿಕೆಯಿದ್ದಷ್ಟುಹೂ ಸಿಗದ ಕಾರಣಮಾರುಕಟ್ಟೆಯಲ್ಲಿ ದರ ಏರುತ್ತಿದೆ.

ಆದರೆ ಮಾರುಕಟ್ಟೆಯಲ್ಲಿ ಹೂವಿಗೆ ಎಷ್ಟೇ ಬೇಡಿಕೆಹೆಚ್ಚಾದರೂ ಬೆಳೆಗಾರರಿಗೆ ಮಾತ್ರ 1250 ರೂ.ಗಿಂತ ಹೆಚ್ಚುಬೆಲೆ ಸಿಗುವುದಿಲ್ಲ. ಪೂರೈಕೆಗಿಂತ ಬೇಡಿಕೆ ಹೆಚ್ಚಾಗಿ ದರಏರಿಕೆಯಾದಾಗ ಇದರ ಲಾಭ ಬೆಳೆಗಾರರಿಗಿಂತ ಹೆಚ್ಚಾಗಿವ್ಯಾಪಾರಿಗಳಿಗೆ ಹೋಗುತ್ತದೆ.ಕಳೆದ ಒಂದು ತಿಂಗಳಲ್ಲಿ ಕಟ್ಟೆಯಲ್ಲಿ 12 ಬಾರಿ ಮಲ್ಲಿಗೆಬೆಲೆ ನಾಲ್ಕಂಕಿ ತಲುಪಿದ್ದು 6 ಬಾರಿ ಬೆಳೆಗಾರರಿಗೆ ಗರಿಷ್ಠ ದರ 1250 ರೂ. ಸಿಕ್ಕಿದೆ. ಈ ಅವಧಿಯಲ್ಲಿ ಕನಿಷ್ಠ ದರ 280 ರೂ. ಆಗಿತ್ತು. ಕಳೆದ 30 ದಿನಗಳಲ್ಲಿ ಬೆಳೆಗಾರರಿಗೆ ಸರಾಸರಿಅಟ್ಟೆಗೆ 818ರೂ. ಬೆಲೆ ಸಿಕ್ಕಿದೆ.

ತುಳುನಾಡಿನ ಓಲೆ ಬೆಲ್ಲ ಸಿಹಿಯಲ್ಲೂ ಪೂರ್ಣ ಆರೋಗ್ಯ

ಜಗತ್ತಿನ ಬಹುತೇಕ ಹಣ್ಣುಗಳ ರಸ, ಸುವಾಸನೆ ಗಳನ್ನು ಕೃತಕವಾಗಿ ತಯಾರಿಸಬಹುದು. ಆದರೆ, ಓಲೆ ಬೆಲ್ಲ ಮಾತ್ರ ಯಾವುದೇ ಕೃತಕ ವಿಧಾನಗಳಿಂದಲೂ ಸೃಷ್ಟಿಸಲಾಗದ ಅಪ್ಪಟ ದೇಸೀ ಉತ್ಪನ್ನ. ಅಚ್ಚುಬೆಲ್ಲ ಮತ್ತು ನೀರು ನೀಡಿ ಅತಿಥಿಗಳನ್ನು ಸ್ವಾಗತಿಸುವುದು ತುಳುನಾಡಿನ ಜನರ ಸಂಪ್ರದಾಯದ ಒಂದು ಭಾಗವಾದರೆ ಓಲೆಬೆಲ್ಲ ಶಾರೀರಿಕ ಆರೋಗ್ಯದ ವಿಚಾರದಲ್ಲಿ ವಿಶೇಷ ಮಹತ್ವ, ಸ್ಥಾನಮಾನ ಪಡೆದುಕೊಂಡಿದೆ. ಹೆರಿಗೆಯ ಬಳಿಕ ನಡೆಸಬೇಕಾದ ಬಾಣಂತನದಲ್ಲಂತೂ ಓಲೆ ಬೆಲ್ಲವೇ ಪ್ರಧಾನ.
ಅದೂ ಆಧುನಿಕತೆಯ ಈ ಕಾಲದಲ್ಲಯೂ ಸಹ ಉಳಿದುಕೊಂಡಿದೆ. ಕ್ಯಾಲ್ಸಿಯಂ ಹೇರಳವಾಗಿರುವ ಓಲೆಬೆಲ್ಲ ದೇಹದ ಹಲವಾರು ಸಮಸ್ಯೆಗಳಿಗೆ ನಾಟಿ ಹಾಗೂ ಆಯುರ್ವೇದ ಔಷಧಿಯ ರೂಪದಲ್ಲಿ ಬಳಸಲ್ಪಡುತ್ತದೆ. ಬಾಯಿ ಸಿಹಿ ಮಾಡಿಕೊಂಡೇ ಆರೋಗ್ಯ ನೀಡುವ ಓಲೆಬೆಲ್ಲ ನಮಗೆ ಅವಶ್ಯಕವೆನಿಸಿದೆ.

ಕರಾವಳಿಯ ದೇವಸ್ಥಾನಕ್ಕೆ ಗರ್ಭಗುಡಿಯೇ ಇಲ್ಲ !

ಈ ದೇವಸ್ಥಾನದ ವಿಶೇಷತೆ ಎಂದರೆ ಇತರ ದೇವಸ್ಥಾನಗಳಂತೆ ಈ ದೇವಸ್ಥಾನಕ್ಕೆ ಯಾವುದೇ ಕಟ್ಟಡವಿಲ್ಲ, ಗರ್ಭಗುಡಿಯಿಲ್ಲ, ಗೋಪುರವಿಲ್ಲ.

ಬದಲಾಗಿ ಇದೊಂದು ಬಯಲು ಗಣಪತಿ. ತೆರೆದ ಸ್ಥಳದಲ್ಲಿರುವ ಗಣಪತಿ. ಹರಕೆ ಹೊತ್ತು ಈ ಸ್ಥಳಕ್ಕೆ ಬಂದು ಗಣಪನಲ್ಲಿ ಪ್ರಾರ್ಥಿಸಿದರೆ 2 ತಿಂಗಳೊಳಗಾಗಿ ಅವರ ಬೇಡಿಕೆ ಈಡೇರುತ್ತದಂತೆ. ಅದರ ಮರುದಿನವೇ ಈ ಕ್ಷೇತ್ರಕ್ಕೆ ಬಂದು ಗಂಟೆ ಕಟ್ಟುತ್ತಾರೆ. ಹಾಗಾಗಿ ಇಲ್ಲಿ ಸಾವಿರಾರು ಗಂಟೆಗಳನ್ನು ಕಾಣಬಹುದು.

ಹೌದು ಇದು ಬೆಳ್ತಂಗಡಿ ಕೊಕ್ಕಡದ ಸೌತಡ್ಕ ಗಣಪತಿ ದೇವಳದ ವಿಶೇಷತೆ. ಇದು ಬರೀ ದೇವಳ ಮಾತ್ರವಲ್ಲ ಪ್ರವಾಸಿ ತಾಣವಾಗಿಯೂ ಗುರುತಿಸಿಕೊಂಡಿದೆ.

ಮಂಗಳೂರಿಗೆ ಇರುವಷ್ಟು ಹೆಸರು ಬೇರೆ ಎಲ್ಲೂ ಇಲ್ಲ!

ಇಡೀ ದೇಶದ ಲೆಕ್ಕಚಾರ ತೆಗೆದು ನೋಡಿದರೆ ಮಂಗಳೂರಿಗೆ ಇರುವಷ್ಟು ಹೆಸರು ಬೇರೆ ಯಾರಿಗೂ ಇಲ್ಲ.
ಒಂದು ಊರಿಗೆ ಅತೀ ಹೆಚ್ಚು ಹೆಸರು ಇರೋದು ಮಂಗಳೂರಿಗೆ ಮಾತ್ರವಂತೆ. ತುಳು ಭಾಷೆಯಲ್ಲಿ ‘ಕುಡ್ಲ’, ಕನ್ನಡದಲ್ಲಿ ‘ಮಂಗಳೂರು‘, ಇಂಗ್ಲೀಷ್‌ನಲ್ಲಿ ‘ಮ್ಯಂಗಳೂರು’, ಮಲಯಾಳಂನಲ್ಲಿ ‘ಮಂಗಳಾಪುರಂ’, ಹವ್ಯಕ ಭಾಷೆಯಲ್ಲಿ ‘ಕೊಡಿಯಾಲ’,ಕೊಂಕಣಿ ಭಾಷೆಯಲ್ಲಿ ‘ಕೊಡಿಯಲ್’, ಬ್ಯಾರಿ ಭಾಷೆಯಲ್ಲಿ ‘ಮೈಕಾಲ’, ಸಂಸ್ಕೃತದಲ್ಲಿ ‘ಮಂಜುರನ್’ ಹಾಗೂ ಉರ್ದು ಭಾಷೆಯಲ್ಲಿ ಕುಡಲ್. ಇದರ ಜತೆಗೆ ಜಲಾಲಾಬಾದ್ ಎನ್ನುವ ಹೆಸರಿನಿಂದಲೂ ಕರೆಯುತ್ತಾರೆ ಎನ್ನುವ ಇತಿಹಾಸ ಪುಟಗಳು ವಿವರಣೆ ನೀಡುತ್ತದೆ.