Tagged: kudlanews

ಕುಡ್ಲದಲ್ಲಿ ಯಕ್ಷಗಾನ ಕಲಾವಿದರು ಓಡಿದರು !

ಮಂಗಳೂರಿನ ಮಂಗಳಾ ಕ್ರೀಡಾಂಗಣ ಯಕ್ಷಗಾನ ಕಲಾವಿದರಿಂದ ತುಂಬಿ ಹೋಗಿತ್ತು. ದ.ಕ, ಉಡುಪಿ, ಉ.ಕ. ಕಾಸರಗೋಡಿನ ಹೆಚ್ಚಿನ ಎಲ್ಲ ಮೇಳಗಳ ಹಿಮ್ಮೇಳ ಹಾಗೂ ಮುಮ್ಮೇಳ ಕಲಾವಿದರಿದ್ದರು.

ಅಲ್ಲಿ ಯಕ್ಷಗಾನವಿರಲಿಲ್ಲ ಬದಲಾಗಿ ಕ್ರೀಡಾಕೂಟ ಆಯೋಜಿಸಲಾಗಿತ್ತು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಮೇಳಗಳ ಯಕ್ಷಗಾನ ಕಲಾವಿದರಿಗೆ ಇದೇ ಮೊದಲ ಬಾರಿಗೆ ಕ್ರೀಡಾಕೂಟ ಆಯೋಜನೆಗೊಂಡಿದೆ.

24 ಮೇಳಗಳ ಸದಸ್ಯರು ಕಾಣಿಸಿಕೊಂಡಿದ್ದಾರೆ. ಮಂದಾರ್ತಿ ಮೇಳ (ಎ)(ಬಿ), ಸಾಲಿಗ್ರಾಮ, ಕಟೀಲಿನ 6 ಮೇಳ, ಬಪ್ಪನಾಡು, ಸಸಿಹಿತ್ಲು , ಎಡನೀರು, ಕೂಡ್ಲು, ಮಲ್ಲ, ಕುತ್ಯಾಳ, ಬೆಂಕಿನಾಥೇಶ್ವರ ಮೇಳ, ಸುಂಕದಕಟ್ಟೆ ಮೇಳ, ಸೌಕೂರು, ಅಮೃತೇಶ್ವರಿ ಕೋಟ, ಮಾರಣಕಟ್ಟೆ ಮೇಳ, ಗೋಳಿಗರಡಿ,ಹಿರಿಯಡ್ಕ, ಮಡಾಮಕ್ಕಿ, ಧರ್ಮಸ್ಥಳ ಮೇಳಗಳ ಕಲಾವಿದರು ಭಾಗವಹಿಸಿದ್ದರು.

ಓಟ, ಉದ್ದಜಿಗಿತ, ಗುಂಡು ಎಸೆತ, ಬಾಂಬ್ ಇನ್‌ದ ಸಿಟಿ, ಸಂಗೀತ ಕುರ್ಚಿ, ರಿಲೇ, ಕ್ರಿಕೆಟ್, ಹಗ್ಗಜಗ್ಗಾಟ ಮೊದಲಾದ ಆಟಗಳಿದ್ದವು. ಸುಮಾರು 400 ಮಂದಿ ಕಲಾವಿದರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಹಿರಿಯ ಕಲಾವಿದರಾದ ಅರುವ ಕೊರಗಪ್ಪ ಶೆಟ್ಟಿ, ಸಿರಿಬಾಗಿಲು ರಾಮಕೃಷ್ಣ ಮಯ್ಯ, ಭಾಗವತರಾದ ಪ್ರಸಾದ್ ಬಲಿಪ, ರವಿಚಂದ್ರ ಕನ್ನಡಿಕಟ್ಟೆ ಸೇರಿದಂತೆ ಯಕ್ಷಗಾನ ಕಲಾವಿದರು ಪಾಲ್ಗೊಂಡಿದ್ದರು.

ಕುಡ್ಲ ಸಿಟಿಯ ಟ್ರಾಫಿಕ್ ನಿಯಂತ್ರಕ ರವೂಫ್ ಭಾಯಿಗೊಂದು ಸಲಾಂ !

ಅಬ್ದುಲ್ ರವೂಫ್ ಎಂದರೆ ಬಹಳಷ್ಟು ಮಂದಿಗೆ ಗೊತ್ತಿಲ್ಲ. ಟ್ರಾಫಿಕ್‌ನ ರವೂಫ್ ಭಾಯಿ ಎಂದರೆ ತಕ್ಷಣ ಮಂಗಳೂರಿನಲ್ಲಿ ವಾಹನ ಓಡಿಸುವವರಿಗೆ ಗೊತ್ತಿರುವ ಮನುಷ್ಯ.

ಕಳೆದ 26 ವರ್ಷಗಳಿಂದ ಕುಡ್ಲ ಸಿಟಿಯ ಸಂಚಾರ ನಿಯಂತ್ರಣದಲ್ಲಿ ಪ್ರಮುಖ ಪಾತ್ರವಹಿಸುವ ರವೂಫ್ ಈಗ ಹೋಮ್ ಗಾರ್ಡ್‌ನಲ್ಲಿ ನೌಕರಿ ಮಾಡುತ್ತಿದ್ದಾರೆ. ಈಗ ರಂಜಾನ್ ಉಪವಾಸದ ಸಮಯದಲ್ಲಿ ನಮಾಜ್ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ ಹೆಚ್ಚಾಗಿ ಸಂಜೆಯ ಹೊತ್ತು ಮಸೀದಿ ಸುತ್ತಮುತ್ತ ಹೆಚ್ಚು ವಾಹನಗಳ ಜತೆಗೆ ಟ್ರಾಫಿಕ್ ಸಮಸ್ಯೆ ಉಂಟಾಗುತ್ತದೆ.

ಈಗ ರವೂಫ್ ಮಾಡುತ್ತಿರುವ ಮುಖ್ಯ ಕೆಲಸ ಎಂದರೆ ನಗರದ ಪ್ರಮುಖ ನಾಲ್ಕು ಮಸೀದಿಗಳ ಟ್ರಾಫಿಕ್ ಸಮಸ್ಯೆಗೆ ಪರಿಹಾರ ನೀಡಲು ಬೆಳಗ್ಗೆ 8ರಿಂದ ರಾತ್ರಿ 10ರ ವರೆಗೆ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಬಿಸಿಲು, ಮಳೆ ಎನ್ನದೇ ಕಡಿಮೆ ಸಂಬಳದಲ್ಲಿ ದುಡಿಯುವ ಟ್ರಾಫಿಕ್‌ನ ಅಬ್ದುಲ್ ರವೂಫ್ ನಿಜವಾಗಿಯೂ ‘ಕುಡ್ಲ ಸಿಟಿ’ಯ ಹೆಮ್ಮೆಯ ನಾಗರಿಕ ಎನ್ನಬಹುದು.

ಕುಡ್ಲದ ಹಾಟ್ ವೆದರ್‌ಗೆ ಹೀಗೊಂದು ತಂತ್ರ !

ಕುಡ್ಲ ಮಾತ್ರವಲ್ಲ ಇಡೀ ಕರಾವಳಿ ನಗರಿಯೇ ಬಿಸಿಲಿನ ಬೇಗೆಯಲ್ಲಿ ನಿತ್ಯನೂ ಸುಡುತ್ತಿದೆ. ಒಂದೆಡೆ ಮಳೆ ಇಲ್ಲದೇ ನೀರಿಗೆ ತಾತ್ವರ ಕಾಣಿಸಿಕೊಂಡರೆ ಇನ್ನು ದೇವಸ್ಥಾನ, ಹೋಟೆಲ್‌ಗಳಲ್ಲಿಯೂ ನೀರಿನ ಬರ ಕಾಣಿಸಿಕೊಂಡಿದೆ.

ಹೆಚ್ಚುತ್ತಿರುವ ಬಿಸಿಲಿನ ತಾಪಮಾನ ನೋಡಿದರೆ ತಕ್ಷಣವೇ ಒಂದು ಬಿಂದಿಗೆ ನೀರನ್ನು ಮೈಗೆ ಹಾಕಿಕೊಂಡು ಬಿಡೋಣ ಎನ್ನುವ ಭಾವನೆ ಕುಡ್ಲದ ಮಂದಿಗೆ ಮೂಡಿದರೆ ಅದರಲ್ಲಿ ಯಾವುದೇ ವಿಶೇಷ ಇಲ್ಲ ಮಾರಾಯ್ರೆ.

ಉದ್ಯೋಗ ಹುಡುಕುವ ಮಹಿಳೆಯರಿಗೆ ಫ್ರೀ ಹಾಸ್ಟೆಲ್

208-19ನೇ ಸಾಲಿನ ಆಯವ್ಯಯ ಘೋಷಣೆಯಂತೆ ಬೆಂಗಳೂರು ನಗರಕ್ಕೆ ಉದ್ಯೋಗ ಸಂದರ್ಶನ ಪ್ರವೇಶ ಪರೀಕ್ಷೆಗಳಿಗೆ ಒಂಟಿಯಾಗಿ ಬರುವಂತಹ ಎಲ್ಲಾ ವರ್ಗದ ಮಹಿಳೆಯರಿಗೆ ವರಮಾನ ಮಿತಿಯಿಲ್ಲದೇ ೩ ದಿನಗಳವರೆಗೂ ಉಚಿತ ಊಟೋಪಹಾರ ಮತ್ತು ಸುರಕ್ಷಿತ ವಾಸ್ತವ್ಯವನ್ನು ಟ್ರಾನ್ಸಿಟ್ ಹಾಸ್ಟೆಲ್‌ಗಳಲ್ಲಿ ಕಲ್ಪಿಸಲಾಗುತ್ತದೆ.
ಬೆಂಗಳೂರಿನಲ್ಲಿ ಲಭ್ಯವಿರುವ 13 ಟ್ರಾನ್ಸಿಟ್ ಹಾಸ್ಟೆಲ್‌ಗಳು : ಕರ್ನಾಟಕ ಸ್ಟೇಟ್ ಕೌನ್ಸಿಲ್ ಫಾರ್ ಚೈಲ್ಡ್ ವೆಲ್ಫೇರ್, ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ದೂರವಾಣಿ ಸಂಖ್ಯೆ: 080&23330846, 22925898.
ಶ್ರೀ ಶಾರದಾ ಕುಟೀರ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ಶಂಕರಾಪುರ ದೂರವಾಣಿ ಸಂಖ್ಯೆ: 08026674697.
ಯಂಗ್ ವುಮೆನ್ ಕ್ರಿಶ್ಚಿಯನ್ ಅಸೋಸಿಯೇಶನ್ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ದೂರವಾಣಿ ಸಂಖ್ಯೆ: 080&22238574,

ಯುನಿವರ್ಸಿಟಿ ವುಮೆನ್ಸ್ ಅಸೋಸಿಯೇಶನ್ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ದೂರವಾಣಿ ಸಂಖ್ಯೆ: 080&22223314, 26631838, 9845023783.

ಮಹಾತ್ಮಾಗಾಂಧಿ ವಿದ್ಯಾಪೀಠ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ದೂರವಾಣಿ ಸಂಖ್ಯೆ: 080&26662226,
ಜಯನಗರ ಸ್ತ್ರೀ ಸಮಾಜ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ದೂರವಾಣಿ ಸಂಖ್ಯೆ: 080&26674697,
ಆಲ್ ಇಂಡಿಯಾ ವುಮೆನ್ಸ್ ಕಾನ್ಫೋರೆನ್ಸ್ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ದೂರವಾಣಿ ಸಂಖ್ಯೆ: 080&26349676.
ಬಸವ ಸಮಿತಿ, ಬಸವ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ದೂರವಾಣಿ ಸಂಖ್ಯೆ:080&22723355,
ವಿಶಾಲ್ ವಿದ್ಯಾ ಸಂಸ್ಥೆ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ದೂರವಾಣಿ ಸಂಖ್ಯೆ:9341289653.
ಕರ್ನಾಟಕ ರೂರಲ್ ಪೂರ್ ಆಂಡ್ ಹ್ಯಾಂಡಿಕ್ಯಾಪ್ಡ್ ಡೆವೆಲಪ್ ಮೆಂಟ್ ಸೊಸೈಟಿ, ವರ್ಕಿಂಗ್ ವುಮೆನ್ಸ್ ಹಾಸ್ಟೆಲ್, ಪೀನ್ಯಾ. ನ್ಯಾಶನಲ್ ಲಾ ಸ್ಕೂಲ್ ಆಫ್ ಇಂಡಿಯನ್ ಯುನಿವರ್ಸಿಟಿ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ದೂರವಾಣಿ ಸಂಖ್ಯೆ: 080&231604331,
ಯಂಗ್ ವುಮೆನ್ ಕ್ರಿಶ್ಚಿಯನ್ ಅಸೋಸಿಯೇಶನ್ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ದೂರವಾಣಿ ಸಂಖ್ಯೆ: 080&25634813,
ರೀಜಿನಲ್ ಇಂಸ್ಟಿಟ್ಯೂಟ್ ಆಫ್ ಇಂಗ್ಲೀಷ್ ಸೌತ್ ಇಂಡಿಯಾ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ದೂರವಾಣಿ ಸಂಖ್ಯೆ: 080&23213243, 23218452.

ತರಕಾರಿ ಕೆಡದಂತೆ ಕೋಟಿಂಗ್ ಪ್ಲ್ಯಾನ್ !

ತರಕಾರಿಯೊಂದನ್ನು ನಾಲ್ಕೈದು ದಿನಕ್ಕಿಂತ ಹೆಚ್ಚು ಕಾಲ ಕೆಡದಂತೆ ಸಂರಕ್ಷಿಸುವುದು ಕಷ್ಟ ಆದರೆ ಪುತ್ತೂರಿನ 15 ರ ಹರೆಯದ ಅಮೋಘ ನಾರಾಯಣ ವೆಜಿಟೇಬಲ್ ಕೋಟಿಂಗ್‌ಗೆ ನೈಸರ್ಗಿಕ ವಿಧಾನದ ಯಶಸ್ವಿ ಪ್ರಯೋಗ ಮಾಡಿದ್ದು, ಅದಕ್ಕೀಗ ಪೇಟೆಂಟ್ ಪಡೆಯಲು ನಿರ್ಧರಿಸಿದ್ದಾರೆ. ಮೂಡುಬಿದಿರೆಯಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ.

ಅಮೋಘ ಬದನೆ ಕಾಯಿಗೆ ಬೀಂಪುಳಿ ಎಂಬ ಮರದ ಎಲೆಯನ್ನು (ಬಿಲಿಂಬಿ ಲೀವ್ಸ್) ಬಳಸಿಕೊಂಡು ಅದರ ನಿರ್ದಿಷ್ಟ ಅಂಶವನ್ನು ಪಡೆದುಕೊಂಡು ತಯಾರಿಸಿದ ದ್ರಾವಣದಲ್ಲಿ ಬದನೆಯನ್ನು ಒಂದು ಗಂಟೆ ಮುಳುಗಿಸಿಡಲಾಯಿತು.
ಈ ಪರಿಸರ ಸ್ನೇಹಿ ಕ್ರಿಯೆಗೆ ಒಳಪಟ್ಟ ಬದನೆ 12 ದಿನಗಳ ಕಾಲ ಕೆಡದಂತೆ, ಹಣ್ಣಾಗದಂತೆ ಸ್ಥಿತಪ್ರಜ್ಞವಾಗಿತ್ತು. ಎನ್‌ಐಟಿಕೆ ಸೇರಿದಂತೆ ನಾನಾ ಕಡೆ ಈ ಪ್ರಯೋಗದ ವೈಜ್ಞಾನಿಕ ಪರೀಕ್ಷೆ ನಡೆಸಿ ಯಶಸ್ವಿ ಫಲಿತಾಂಶ ಪಡೆಯಲಾಯಿತು.

ಅಮೆರಿಕದಲ್ಲಿ ಜೂ.17ರಿಂದ 22 ರತನಕ ನಡೆಯಲಿರುವ ’ಜೀನಿಯಸ್ ಒಲಿಂಪಿಯಾಡ್’ ಅಂತಾರಾಷ್ಟ್ರೀಯ ವಿಜ್ಞಾನ ಮೇಳಕ್ಕೆ ಆಯ್ಕೆಯಾಗಿರುವ ಅಮೋಘ ನಾರಾಯಣ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ (ಇಸ್ರೋ) ನೀಡುವ ಯುವ ವಿಜ್ಞಾನಿ ತರಬೇತಿ ಕಾರ್ಯಕ್ರಮ ‘ಯುವಿಕಾ: 2019’ಕ್ಕೆ ಕೂಡ ಆಯ್ಕೆಯಾಗಿದ್ದಾರೆ.