ಕುಡ್ಲದಲ್ಲಿ ಪಿಜಿ, ಹಾಸ್ಟೆಲ್ ಹಾಗೂ ಬಾಡಿಗೆಗೆ ಮನೆ ಕೊಡುವ ಮಂದಿ ಹಾಗೂ ಅದರಲ್ಲಿ ವಾಸ ಇರುವ ಮಂದಿ ಇನ್ನು ಮುಂದೆ ತಮ್ಮ ಹತ್ತಿರದ ಪೊಲೀಸ್ ಠಾಣೆಗೆ ಅವರ ಪೂರ್ಣ ಮಾಹಿತಿ ನೀಡೋದು ಕಡ್ಡಾಯ ವಾಗಲಿದೆ. ಮಂಗಳೂರು ಪೊಲೀಸ್ ಕಮೀಷನರ್ ಈಗಾಗಲೇ ಈ ಕುರಿತು ಖಡಕ್ ಸೂಚನೆ ನೀಡುವ ಮೂಲಕ ಕುಡ್ಲ ಮತ್ತಷ್ಟು ಸೇಫ್ ಝೋನ್ ಗೆ ಇಳಿಸುವ ಕೆಲಸ ಮಾಡುತ್ತಿದ್ದಾರೆ. ಕಮೀಷನರ್ ಸಂದೀಪ್ ಪಾಟೀಲ್ ಸಾಹೇಬ್ರ ಕೆಲಸಕ್ಕೆ ಎಲ್ಲೆಡೆ ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ.
Tagged: Mangalore police commissioner
ಕುಡ್ಲ ಪೊಲೀಸರ ಹೈಟೆಕ್ ಮಂತ್ರ
ಪೊಲೀಸ್ ಎಂದಾಕ್ಷಣ ಏನೋ ಅವರ ಕುರಿತು ಭಾವನೆಯೊಂದು ಬೆಳೆದು ಬಿಡುತ್ತದೆ. ಆದರೆ ಇಂತಹ ಭಾವನೆಗಳನ್ನು ಬದಲಿಸುವ ಜತೆಯಲ್ಲಿ ಜನರು ಕೂಡ ಪೊಲೀಸ್ ರಿಗೆ ನೆರವಾಗಿ ಎನ್ನುವ ಮಾತು ಪದೇ ಪದೇ ಇಲಾಖೆ ಹೇಳುತ್ತಾ ಬಂದಿದೆ.
ಆದರೆ ಕುಡ್ಲದ ಪೊಲೀಸ್ ಕಮೀಷನರ್ ಸಂದೀಪ್ ಪಾಟೀಲ್ ಒಂದು ಹೆಜ್ಜೆ ಮುಂದೆ ಹೋಗಿ ನಿಮ್ಮ ಸಮಸ್ಯೆಯನ್ನು ನೇರವಾಗಿ ನನಗೆ ತಿಳಿಸಿ ಯಾವುದೇ ಮಾಹಿತಿ ಇದ್ದರೂ ಸಾಮಾಜಿಕ ಜಾಲತಾಣ ವಾದ ವ್ಯಾಟ್ಸಪ್ , ಟ್ವಿಟರ್ ಜತೆಗೆ ಇಮೇಲ್ ಮೂಲಕವೂ ಹಂಚಿಕೊಳ್ಳುವ ಕೆಲಸ ಮಾಡಿ ಎಂದಿದ್ದಾರೆ. ಈ ಮೂಲಕ ಪೊಲೀಸ್ ಕಮೀಷನರ್ ಜನರ ಸಮಸ್ಯೆಗಳಿಗೆ ಕಿವಿ ಯಾಗಿದ್ದಾರೆ.

