Tagged: Mangaluru

ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಪ್ರಶಸ್ತಿ

ಮಂಗಳೂರಿನ ಹರೇಕಳದ ಹಾಜಬ್ಬರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ. ಇಡೀ ತುಳುನಾಡಿಗೆ ಮಾತ್ರವಲ್ಲ ಇಡೀ ಕರ್ನಾಟಕ ಇದು ಹೆಮ್ಮೆಯ ವಿಚಾರ.
ಅಂದಹಾಗೆ ಇವರು ಕೋಟ್ಯಾಧಿಪತಿಯಲ್ಲ. ಉನ್ನತ ವಿದ್ಯಾಭ್ಯಾಸವಂತೂ ಅವರಿಗೆ ದೂರದ ಬೆಟ್ಟವಾದರೂ ಪಕ್ಕಾ ಅಕ್ಷರ ಸ್ನೇಹಿ. ಮಂಗಳೂರಿನ ರಸ್ತೆ ಬದಿಗಳಲ್ಲಿ ಕಿತ್ತಳೆ ಹಣ್ಣು ಮಾರಿಕೊಂಡು ನಿತ್ಯ ಜೀವನ ಸಾಗಿಸುತ್ತಿರುವ ಹಾಜಬ್ಬನವರು ತಮ್ಮ ಜೀವನ ಸುಖಗಿಂತಲೂ ಬೇರೆಯವರ ನೋವಿಗೆ ಸ್ಪಂದಿಸುವವರು.

ಹಾಜಬ್ಬನವರು ಕಿತ್ತಳೆ ವ್ಯಾಪಾರದಿಂದ ಅವರಿಗೆ ದಿನಕ್ಕೆ ಲಭಿಸುವುದು ಕೇವಲ 100 ರಿಂದ 150 ರೂಪಾಯಿ. ಮಂಗಳೂರು ನಗರದಲ್ಲಿ ಕಿತ್ತಳೆ ಹಣ್ಣು ಮಾರುವ ಮೂಲಕ ಅಕ್ಷರದ ಕನಸು ಕಂಡ ಅವರು ತನ್ನೂರಾದ ಹರೇಕಳ ನ್ಯೂಪಡು ಎಂಬ ಪುಟ್ಟ ಹಳ್ಳಿಯಲ್ಲಿ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಸರಕಾರಿ ಕಚೇರಿಗಳಿಗೆ ಅಲೆದು ಕೊನೆಗೂ ಪ್ರಾಥಮಿಕ ಶಾಲೆಗೆ ಅನುದಾನ ತಂದು ಕೊಡುವ ಕೆಲಸದಲ್ಲಿ ಯಶಸ್ಸು ಪಡೆದವರು.
ವಿಶೇಷ ಎಂದರೆ ಈ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರನ್ನಾಗಿ ಹಾಜಬ್ಬ ಅವರನ್ನು ಆಯ್ಕೆ ಮಾಡಿದ ನಂತರ ಅವರು ನಾನಾ ಇಲಾಖೆಗಳಿಗೆ ಭೇಟಿ ಕೊಟ್ಟು ಅನುದಾನ ಕೊಡುವ ತನಕನೂ ಅಲ್ಲಿಂದ ಕದಲದೇ ಅಧಿಕಾರಿಗಳು ಕೊನೆಗೆ ಅನುದಾನ ಮಂಜೂರು ಮಾಡುವಂತಹ ಸ್ಥಿತಿಗೆ ತಂದು ಬಿಟ್ಟಿದ್ದರು. ನಿಜವಾಗಿಯೂ ಅವರ ಹೋರಾಟದ ಬದುಕು ಈಗ ಜಗತ್ತು ಅರಿತಿದೆ.

ಮಕ್ಕಳು ಬೆಳೆಯಲು, ಬೀಳಲು ನಾವೇ ಹೊಣೆ: ಸ್ವಾಮೀಜಿ

ಮಕ್ಕಳು ಬೆಳೆಯಲೂ ನಾವೇ ಕಾರಣ, ಬೀಳಲೂ ನಾವೇ ಕಾರಣ. ಮಕ್ಕಳ ಮನಸ್ಸಿನ ಭಾವನೆಗಳನ್ನು ಅರ್ಥ ಮಾಡಿಕೊಳ್ಳುವ ಸಾಮಥ್ರ್ಯ ಎಲ್ಲರಿಗೂ ಇರಬೇಕು ಎಂದು ಮಂಗಳೂರು ಬಿಜಿಎಸ್ ಸಂಸ್ಥೆಗಳ ಕಾರ್ಯದರ್ಶಿ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರ ಮಾತು.
ಅವರು ಶನಿವಾರ ಕಾವೂರಿನ ಬಿಜಿಎಸ್ ಎಜುಕೇಶನ್ ಸೆಂಟರ್‍ನಲ್ಲಿ ಶ್ರೀಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್, ಬಿಜಿಎಸ್ ಚುಂಚಾದ್ರಿ ಹಾಗೂ ಬಿಜಿಎಸ್ ಸಂಸ್ಥೆಗಳ ಸಹಯೋಗದಲ್ಲಿ ನಡೆದ ಕುಡ್ಲೋತ್ಸವ 2019 ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.
ಮಕ್ಕಳ ಮನಸ್ಥಿತಿಯನ್ನು ಅರ್ಥ ಮಾಡಿಕೊಳ್ಳುವ ಮೂಲಕ ಅವರ ಬೆಳವಣಿಗೆಗೆ ಪೂರಕ ಪ್ರಯತ್ನ ಸಂಸ್ಥೆಯಿಂದ ನಡೆಯುತ್ತಾ ಇದೆ. ಶಿಕ್ಷಣದ ಕ್ರಾಂತಿಯ ಬಾಲಗಂಗಾಧರನಾಥ ಸ್ವಾಮೀಜಿ ಅವರ ಕನಸನ್ನು ನಿಜಗೊಳಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದ್ದೇವೆ. ಮಕ್ಕಳು ಕೆಡುವುದಿಲ್ಲ ಅವರು ಬಿಳಿ ಹಾಳೆ ಇದ್ದ ಹಾಗೆ ನಾವು ಏನು ಗೀಚುತ್ತೇವೊ ಅದು ಅಚ್ಚಾಗುತ್ತಾ ಹೋಗುತ್ತದೆ. ಸಂಸ್ಕಾರ, ಉತ್ತಮ ಶಿಕ್ಷಣ ಹಾಗೂ ಜೀವನ ಕೌಶಲ್ಯ ಈ ಬಗೆಯಲ್ಲಿ ನಾವೇನು ನೀಡುತ್ತೇವೆಯೊ ಅದು ಎಳೆಯರ ಮನಸ್ಸಿನ ಮೇಲೆ ಪ್ರಭಾವ ಬೀರುತ್ತದೆ ಎಂದರು.
ಈ ಸಂದರ್ಭ ಮನಪಾ ಕಮೀಷನರ್ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ, ನಾಗಮಂಗಲ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಸಿಇಒ ಎನ್.ಎಸ್.ರಾಮೇಗೌಡ, ಎಜುಕೇಶನ್ ಸೆಂಟರ್‍ನ ವ್ಯವಸ್ಥಾಪಕ ಸುಬ್ಬ ಕಾರಡ್ಕ ಉಪಸ್ಥಿತರಿದ್ದರು.

ಹಣಕಾಸು ಸಚಿವರಿಂದ ಪದಕ ಪಡೆದ ಕುಡ್ಲದ ಮಿಶೆಲ್ !

ಕುಡ್ಲದ ನೀರುಡೆ ಕಲ್ಲಮುಂಡ್ಕೂರಿನ ಮಿಶೆಲ್ ಕ್ವೀನಿ ಡಿಕೋಸ್ತಾ ಅವರ ಕೆಲಸವನ್ನು ನೋಡಿ ಕೇಂದ್ರದ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಪದಕ ನೀಡಿ ಗೌರವಿಸಿದ್ದಾರೆ.

ಅರೇ ಯಾರಿದು ಮಿಶೆಲ್ ಎನ್ನುತ್ತೀರಾ..? ಮಿಶೆಲ್ ನೀರುಡೆಯ ಕಲ್ಲಮುಂಡ್ಕೂರಿನ ಲಾಜರಸ್ ಡಿ ಕೋಸ್ತಾ ಮತ್ತು ನ್ಯಾನ್ಸಿ ಡಿ ಕೋಸ್ತಾ ದಂಪತಿಗಳ ಎರಡನೇ ಮಗಳು. ಮೂಲತಃ ಕೃಷಿ ಕುಟುಂಬದಿಂದ ಬೆಳೆದು ಬಂದ ಹುಡುಗಿ ಮಿಶೆಲ್ 2015ರಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ 387ನೇ ರ‍್ಯಾಂಕ್‌ಗಳಿಸಿಕೊಂಡು ನಾಗರಿಕ ಸೇವೆಯಲ್ಲಿ ಐಆರ್‌ಎಸ್ ಮಾಡುತ್ತಿದ್ದಾರೆ.

ಇದರ ಪಾಸಿಂಗ್ ಔಟ್ ಕಾರ‍್ಯಕ್ರಮದಲ್ಲಿ ವಿಶೇಸ ಸಾಧನೆ ಮಾಡಿದ ಮಿಶೆಲ್‌ಗೆ ಖುದ್ದು ಹಣಕಾಸು ಸಚಿವರು ಪದಕ ನೀಡಿ ಗೌರವಿಸಿದ್ದಾರೆ. ಇದು ಕುಡ್ಲದ ಪ್ರತಿಯೊಬ್ಬ ಹೆಣ್ಣು ಮಗಳು ಸಾಧನೆಗೆ ಸಂದ ಗೆಲುವು ಎನ್ನಬೇಕು. ಮಿಶೆಲ್ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿ ಮುಗಿಸಿದವರು.

ಕಿಸ್ ದಿ ಬೊಂಡ ವಿದ್ಯಾರ್ಥಿಗಳ ಅಭಿಯಾನ

ಮಂಗಳೂರಿನಲ್ಲಿ ಹೊಸ ಅಭಿಯಾನವೊಂದು ಆರಂಭವಾಗಿದೆ. ‘ಕಿಸ್ ದಿ ಬೊಂಡ’ ಎನ್ನುವ ಮೂಲಕ ಬೊಂಡವನ್ನು ಪ್ಲಾಸ್ಟಿಕ್ ಸ್ಟ್ರಾ ಇಲ್ಲದೇ ಕುಡಿಯುವ ವಿನೂತನ ಕೆಲಸವಿದು. ಪ್ಲಾಸ್ಟಿಕ್ ಬಳಕೆಯನ್ನೇ ಪೂರ್ಣವಾಗಿ ಬಿಟ್ಟು ಬಿಡೋಣ ಎನ್ನುವ ಸಂದೇಶ ಸಾರುವ ಈ ಅಭಿಯಾನದ ಹಿಂದೆ ವಿದ್ಯಾರ್ಥಿಗಳ ತಂಡವೊಂದು ಕೆಲಸ ಮಾಡಿದೆ.
ಜ್ಯೂಸ್ ಅಂಗಡಿ ಸೇರಿದಂತೆ ಪ್ರತಿಯೊಂದು ಕಡೆಯಲ್ಲೂ ಜ್ಯೂಸ್ ಸೇರಿದಂತೆ ತಂಪು ಪಾನೀಯಗಳನ್ನು ಪ್ಲಾಸ್ಟಿಕ್ ಸ್ಟ್ರಾ ಬಿಟ್ಟು ಉಳಿದ ರೀತಿಯಲ್ಲಿ ಕುಡಿಯಲು ಮುಂದಾಗಿ ಎನ್ನುವುದೇ ಈ ಅಭಿಯಾನದ ಮೂಲ ಉದ್ದೇಶ. ವಿದ್ಯಾರ್ಥಿಗಳ ಈ ಚಾಲೆಂಜ್‌ಗೆ ನೀವು ಸಹಕರಿಸಿ.

ರಸ್ತೆ ಸರಿಪಡಿಸಲು ಮೂನ್‌ವಾಕ್ ಮಾಡಿದಳು ಕುಡ್ಲದ ಹುಡುಗಿ

ಮಂಗಳೂರು: ಬೆಂಗಳೂರಿನಲ್ಲಿ ಬಾದಲ್ ನಂಜುಂಡಸ್ವಾಮಿ ಎಂಬ ಕಲಾವಿದ ಗಗನ ಯಾತ್ರಿಯಂತೆ ವೇಷಧರಿಸಿ ಹೊಂಡದಿಂದ ಕೂಡಿದ ರಸ್ತೆಯಲ್ಲಿ ಮೂನ್ ವಾಕ್ ಮಾಡಿದಂತೆ ಮಂಗಳೂರಿನಲ್ಲೂ 6 ತರಗತಿ ವಿದ್ಯಾರ್ಥಿನಿಯೊಬ್ಬಳು ಮೂನ್‌ವಾಕ್ ಮಾಡಿ ಪಾಲಿಕೆ ಗಮನ ಸೆಳೆಯಲು ಪ್ರಯತ್ನಿಸಿದ್ದಾಳೆ.

ನಗರದಲ್ಲಿ ಪ್ರಸಿದ್ಧಿ ಪಡೆದ ಎಂಸಿಸಿ ಸಿವಿಕ್ ಗ್ರೂಪ್ ಮಂಗಳೂರಿನಲ್ಲಿ ರಸ್ತೆ ಗುಂಡಿಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಹಲವು ಬಾರಿ ಪಾಲಿಕೆಗೆ ಮನವಿ ಸಲ್ಲಿಸಿತ್ತು. ಆದರೆ, ಪ್ರಯೋಜನವಾಗದ ಹಿನ್ನೆಲೆಯಲ್ಲಿ ಗ್ರೂಪ್‌ನ ಪ್ರಮುಖರಾದ ಅರ್ಜುನ್ ಮಸ್ಕರೇನ್ಹಸ್ ಹಾಗೂ ಅಜೊಯ್ ಡಿಸಿಲ್ವ ಅವರು ಮೂನ್‌ವಾಕ್ ಪ್ರತಿಭಟನೆಗೆ ನಿರ್ಧರಿಸಿದ್ದರು.
ಅದರಂದತೆ ಸೆ. 20 ರಂದು ರಂದು ರಾತ್ರಿ 10 ಗಂಟೆ ವೇಳೆಗೆ 6 ನೇ ತರಗತಿ ವಿದ್ಯಾರ್ಥಿನಿ ಆಡ್ಲಿನ್ ಡಿಸಿಲ್ವ ಅವರು ಬಾಹ್ಯಾಕಾಶದಲ್ಲಿ ನಡೆಯುವಾಗ ಧರಿಸುವ ಬಟ್ಟೆ ಹಾಗೂ ಇತರ ಪರಿಕರಗಳನ್ನು ಧರಿಸಿ, ಮಂಗಳೂರು ಸೆಂಟ್ರಲ್ ಮಾರ್ಕೆಟ್ ಮುಂದಿನ ಹೊಂಡ ಗುಂಡಿಯಿಂದ ಕೂಡಿದ ರಸ್ತೆಯಲ್ಲಿ ಚಂದ್ರನ ಮೇಲೆ ನಡೆದಂತೆ ನಡೆದು ಅದರನ್ನು ವಿಡಿಯೋ ಚಿತ್ರೀಕರಣ ನಡೆಸಿದ್ದರು. ಬಳಿಕ 33 ಸೆಕೆಂಡ್‌ನ ವಿಡಿಯೋವನ್ನು ವಾಟ್ಸಾಪ್-ಫೇಸ್‌ಬುಕ್‌ನಲ್ಲಿ ವೈರಲ್ ಮಾಡಿ ಪಾಲಿಕೆಯ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ.