Tagged: politics

ಕುಡ್ಲದಲ್ಲಿ ಸಿಗುವ ಇಂದಿನ ತಾಜಾ ಮಾತು ಎಂಚಿನ ಬರ್ಸಾ ಮಾರಾಯ್ರೆ

ಮಳೆಗಾಲ ಎನ್ನುವ ಮಾತು ಕುಡ್ಲಕ್ಕೆ ಸರಿಯಾಗಿ ಅನ್ವಯವಾಗಲೇ ಇಲ್ಲ. ಆದರೆ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ ಕುಡ್ಲದ ಜನರಿಗೆ ರಿಯಲ್ ಮಳೆಗಾಲವನ್ನು ನೆನಪಿಸಿತು. ಬಹಳ ದಿನಗಳ ನಂತರ ಕುಡ್ಲದ ಜನರು ಎಂಚಿನ ಬರ್ಸಾ ಮಾರಾಯ್ರೆ ನನಲಾ ಬೋಡು( ಎಂತಹ ಮಳೆ ಮಾರಾಯ್ರೆ ಇನ್ನಷ್ಟು ಬರಲಿ) ಎನ್ನುವ ಮಾತುಗಳೇ ಜಾಸ್ತಿಯಾಗಿ ಕೇಳಲು ಸಿಕ್ಕಿದೆ. ಮಳೆರಾಯನ ಅದ್ಭುತ ಆಟ ಕ್ರಿಕೆಟ್, ರಾಜಕೀಯಕ್ಕಿಂತಲ್ಲೂ ವಿಶೇಷ ದಾಖಲೆಯಾಗಿದೆ.

ಮಂಗಳೂರಿನಲ್ಲಿ ಕಾಣಸಿಗಲಿದೆ ವಾಟರ್ ಪಾಲಿಟಿಕ್ಸ್

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಗೆ ಕುಡಿಯುವ ನೀರು ಪೂರೈಕೆಯಾಗುವ ತುಂಬೆ ಡ್ಯಾಮ್‌ನಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ. ಇದನ್ನು ಗಮನಿಸಿ ಜಿಲ್ಲಾಡಳಿತ ರೇಶನಿಂಗ್ ಮೂಲಕ ನೀರು ಪೂರೈಕೆ ಆರಂಭಿಸಿತ್ತು.

ಇಲ್ಲಿಯ ಜನಪ್ರತಿನಿಧಿಗಳು ಡ್ಯಾಮ್ ವೀಕ್ಷಿಸಿ, ತುಂಬಾ ನೀರಿದೆ ಎಂದು ಹೇಳಿ, ರೇಶನಿಂಗ್ ನಿಲ್ಲಿಸಲು ಒತ್ತಡ ತಂದರು. ನೀರಿನ ಸೋರಿಕೆ, ಪೋಲು, ದುರ್ಬಳಕೆ ತಡೆದು, ಮಿತ ವ್ಯಯ ಮಾಡಲು ಹೇಳಿ, ಬದಲಿ ವ್ಯವಸ್ಥೆಗೆ ಸಲಹೆ ಮಾಡಬೇಕಾದ ಜನಪ್ರತಿನಿಧಿಗಳು ಪ್ರತಿಪಕ್ಷದವರ ಮಾದರಿಯಲ್ಲಿ ಆರೋಪ- ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ.

ಮಂಗಳೂರು ಸಹಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುವ ಲಕ್ಷಣ ಕಾ ಣಿಸುತ್ತಿಲ್ಲ. ನಗರ ಮಾತ್ರವಲ್ಲ, ಗ್ರಾಮೀಣ ಪ್ರದೇಶಗಳಲ್ಲೂ ನೀರಿನ ತೀವ್ರ ಸಮಸ್ಯೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತೆ ರೇಶನಿಂಗ್ ಆರಂಭಿಸಿದೆ.

ಮತ್ತೆ ರೇಶನಿಂಗ್: ಮೇ 1ರ ಬೆಳಗ್ಗೆ 6 ಗಂಟೆಯಿಂದ ಮೇ 3ರ ಬೆಳಗ್ಗೆ 6 ಗಂಟೆಯ ವರೆಗಿನ 48 ತಾಸುಗಳ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ.
ಮೇ 3ರ ಬೆಳಗ್ಗೆ 6 ಗಂಟೆಯಿಂದ ಮೇ 7ರ ಬೆಳಗ್ಗೆ 6 ಗಂಟೆ ವರೆಗಿನ 96 ಗಂಟೆ ನೀರು ಸರಬರಾಜು ನಡೆಯಲಿದೆ. ಮೇ 7ರ ಬೆಳಗ್ಗೆ 6ರಿಂದ ಮೇ 9ರ ತನಕ ಬೆಳಗ್ಗೆ 6ರ ತನಕ 48 ಗಂಟೆ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ.
ಮೇ 9ರ ಬೆಳಗ್ಗೆ 6ರಿಂದ ಮೇ 13ರ ಬೆಳಗ್ಗೆ 6ರ ತನಕ 96 ಗಂಟೆ ಕಾಲ ನೀರು ಪೂರೈಕೆ ನಡೆಯಲಿದೆ. ಮೇ 13ರ ಬೆಳಗ್ಗೆ 6ರಿಂದ ಮೇ 15ರ ಬೆಳಗ್ಗೆ 6ರ ತನಕ 48 ಗಂಟೆ ಕಾಲ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ. ಮೇ 15ರ ಬೆಳಗ್ಗೆ 6ರಿಂದ ಮೇ 19ರ ಬೆಳಗ್ಗೆ 6 ಗಂಟೆ ತನಕ 96 ಗಂಟೆ ನೀರು ಪೂರೈಕೆ ನಡೆಯಲಿದೆ. ಮೇ 19ರ ಬೆಳಗ್ಗೆ 6ರಿಂದ ಮೇ 21ರ ಬೆಳಗ್ಗೆ 6 ಗಂಟೆ ತನಕ 48 ಗಂಟೆ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ.