Tagged: problem

ಆಯುರ್ ಹೆಲ್ತ್ ಕ್ಲಿನಿಕ್‌ನಲ್ಲಿ ರೋಗಕ್ಕೆ ಪೂರ್ಣ ಪರಿಹಾರ

ಆಧುನಿಕ ಬದುಕಿನಲ್ಲಿ ಹೊಸ ಹೊಸ ಕಾಯಿಲೆಗಳು ಹುಟ್ಟಿಕೊಳ್ಳುವುದು ಸಾಮಾನ್ಯವಾಗಿ ಬಿಟ್ಟಿದೆ. ಆದರೆ ಎಲ್ಲ ಕಾಯಿಲೆಗಳಿಗೂ ಪರಿಪೂರ್ಣ ರೀತಿಯಲ್ಲಿ ದೇಹ ಪ್ರಕೃತಿಗೆ ತಕ್ಕಂತಹ ಚಿಕಿತ್ಸೆ ನೀಡುವುದು ವೈದ್ಯಲೋಕಕ್ಕೆ ಸವಾಲು.

ಆದ್ರೆ ಈ ಎಲ್ಲ ಸವಾಲುಗಳನ್ನು ಮೆಟ್ಟಿನಿಂತು ಚಿಕಿತ್ಸೆ ನೀಡುವ ಮೂಲಕ ರೋಗಿಗಳಿಗೂ ತಮ್ಮ ಬಹುಕಾಲದ ರೋಗದಿಂದ ಮುಕ್ತಿ ಪಡೆದ ಭಾವ ಮೂಡಿಸುವ ಕೆಲಸವನ್ನು ಆಯುರ್ ಹೆಲ್ತ್ ಕ್ಲಿನಿಕ್ ಮಾಡುತ್ತಿದೆ.
ಕುದ್ರೋಳಿಯ ಆಯುರ್ ಹೆಲ್ತ್ ಕ್ಲಿನಿಕ್‌ನಲ್ಲಿ ಪೂರ್ವ ಮತ್ತು ನಂತರದ ಮದುವೆ ಸಮಾಲೋಚನೆ, ಹಿಜಾಮಾ ಅಧಿಗಳು, ಬೆನ್ನುನೋವಿನ ಚಿಕಿತ್ಸೆ, ಬಂಜೆತನಕ್ಕೂ ಪರಿಹಾರ, ಶೀತ ಮತ್ತು ಜ್ವರದ ಚಿಕಿತ್ಸೆ, ಬೊಜ್ಜು ಚಿಕಿತ್ಸೆ, ಮಂಡಿ ನೋವು ಮತ್ತು ಪಾದದ ಕೀಲು ನೋವಿಗೂ ಚಿಕಿತ್ಸೆ, ತಲೆನೋವು ಮತ್ತು ಸೈನಸ್‌ಗೆ ಸಂಬಂಧಪಟ್ಟ ಚಿಕಿತ್ಸೆ ಹೀಗೆ ಅನಾರೋಗ್ಯಕ್ಕೆ ಸಂಬಂಧಪಟ್ಟಂತಹ ಎಲ್ಲ ರೀತಿಯ ಚಿಕಿತ್ಸೆಯನ್ನು ಆಯುರ್ ಕ್ಲಿನಿಕ್‌ನ ಪರಿಣತ ವೈದ್ಯರು ನೀಡುತ್ತಾರೆ.

ಮಂಗಳೂರಿನ ಕುದ್ರೋಳಿಯ ಕರ್ಬಲ ರಸ್ತೆಯ ಎಚ್.ಬಿ.ಟಿ ಶಾಮಿಯಾನ ಎದುರುಗಡೆ ಕ್ಲಿನಿಕ್ ಬೆಳಗ್ಗೆ 10 ರಿಂದ ಮಧ್ಯಾಹ್ನ 2ರ ತನಕ ತೆರೆದಿರುತ್ತದೆ. ಸಂಪರ್ಕ ಮಾಡಲು 9886727569 ಹಾಗೂ 9886327569ಗೆ ಕರೆ ಮಾಡಿ ಆರೋಗ್ಯ ಸಮಸ್ಯೆಗಳಿಗೆ ಪರಿಪೂರ್ಣ ಪರಿಹಾರ.

ಕುಡ್ಲ ಪೊಲೀಸರ ಹೈಟೆಕ್ ಮಂತ್ರ

ಪೊಲೀಸ್ ಎಂದಾಕ್ಷಣ ಏನೋ ಅವರ ಕುರಿತು ಭಾವನೆಯೊಂದು ಬೆಳೆದು ಬಿಡುತ್ತದೆ. ಆದರೆ ಇಂತಹ ಭಾವನೆಗಳನ್ನು ಬದಲಿಸುವ ಜತೆಯಲ್ಲಿ ಜನರು ಕೂಡ ಪೊಲೀಸ್ ರಿಗೆ ನೆರವಾಗಿ ಎನ್ನುವ ಮಾತು ಪದೇ ಪದೇ ಇಲಾಖೆ ಹೇಳುತ್ತಾ ಬಂದಿದೆ.

ಆದರೆ‌ ಕುಡ್ಲದ ಪೊಲೀಸ್ ಕಮೀಷನರ್ ಸಂದೀಪ್ ಪಾಟೀಲ್ ಒಂದು ಹೆಜ್ಜೆ ಮುಂದೆ ಹೋಗಿ ನಿಮ್ಮ ಸಮಸ್ಯೆಯನ್ನು ನೇರವಾಗಿ ನನಗೆ ತಿಳಿಸಿ ಯಾವುದೇ ಮಾಹಿತಿ‌ ಇದ್ದರೂ ಸಾಮಾಜಿಕ ಜಾಲತಾಣ ವಾದ ವ್ಯಾಟ್ಸಪ್ , ಟ್ವಿಟರ್ ಜತೆಗೆ ಇಮೇಲ್ ಮೂಲಕವೂ ಹಂಚಿಕೊಳ್ಳುವ ಕೆಲಸ ಮಾಡಿ ಎಂದಿದ್ದಾರೆ. ಈ ಮೂಲಕ ಪೊಲೀಸ್ ಕಮೀಷನರ್ ಜನರ ಸಮಸ್ಯೆಗಳಿಗೆ ಕಿವಿ ಯಾಗಿದ್ದಾರೆ.

ಹೆಗ್ಗಡೆಯವರು ಬರೆದ ಶಾಕಿಂಗ್ ಪತ್ರ!

ಸ್ವಾಮಿ ದಯಮಾಡಿ ಧರ್ಮಸ್ಥಳಕ್ಕೆ ಸಧ್ಯಕ್ಕೆ ಬರಬೇಡಿ. ಇಲ್ಲಿ‌ ನೀರಿನ ಸಮಸ್ಯೆ ತೀವ್ರವಾಗಿದೆ. ನಿಮ್ಮ ಪ್ರವಾಸ ಮುಂದಕ್ಕೆ ಹಾಕಿಬಿಡಿ ಎನ್ನುವ ಮೂಲಕ ಧಾರ್ಮಿಕ ಕ್ಷೇತ್ರದಲ್ಲಿ ನೀರಿನ ಸಮಸ್ಯೆ ಯನ್ನು ಪತ್ರದ ಮೂಲಕ ಬಿಚ್ಚಿಟ್ಟವರು ಧರ್ಮಸ್ಥಳದ‌ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಈ ಮೂಲಕ ಕುಡ್ಲ ಮಾತ್ರವಲ್ಲದೆ ಗ್ರಾಮಾಂತರ ಪ್ರದೇಶದಲ್ಲೂ ಸಮಸ್ಯೆ ಯ ಚಿತ್ರಣ ಈ ಪತ್ರದ ಮೂಲಕ ಅನಾವರಣ ಗೊಂಡಿತು.

ಕರಾವಳಿಯ ರಾಜಕಾರಣಿಗಳ ಮಾನ ಹರಾಜು ಹಾಕಿದ ಜನತೆ !

ಜನರಿಗೆ ಕುಡಿಯುವ ನೀರಿಗಾಗಿ ರೂಪಿಸಲಾದ ಎತ್ತಿನಹೊಳೆ ಯೋಜನೆ ಬೆಂಬಲಿಸಿ ಕರಾವಳಿಗೆ ಕುಡಿಯುವ ನೀರಿಗೆ ತತ್ವಾರ ಮಾಡಿದ ಜನಪ್ರತಿನಿಧಿಗಳ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಆಕ್ರೋಶವ್ಯಕ್ತಪಡಿಸಿ, ನಗರದ ಹಲವೆಡೆ ಬ್ಯಾನರ್‌ಗಳನ್ನು ಪ್ರದರ್ಶನ ಮಾಡಿದ್ದಾರೆ.

ಮಂಗಳೂರು ನಗರ ಸಹಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಿನ ಹಾಹಾಕಾರ ಹೆಚ್ಚಾಗುತ್ತಿರುವಂತೆಯೇ ಜಿಲ್ಲೆಗೆ ಆಗಿರುವ ಅನ್ಯಾಯವನ್ನು ಖಂಡಿಸಿ ನಗರದ ಹಲವೆಡೆ ಕೊಟ್ಟಾರ, ಪಂಪ್‌ವೆಲ್, ಹಂಪನಕಟ್ಟೆ ಮುಂತಾದೆಡೆ ಬ್ಯಾನರ್ ಹಾಕಲಾಗಿದೆ.
ಈ ಬ್ಯಾನರ್‌ಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರಾದ ಯು.ಟಿ. ಖಾದರ್, ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ, ಸಂಜೀವ ಮಠಂದೂರು, ಹರೀಶ್ ಪೂಂಜ, ಎಸ್. ಅಂಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಎಲ್ಲ ಶಾಸಕರ ಹೆಸರು, ಭಾವಚಿತ್ರ ಹಾಕಿ, ‘ನಿಮ್ಮನ್ನು ಜನ ಚುನಾಯಿಸಿದ್ದು 40 ಲಕ್ಷ ರೂ. ಕಾರಿನಲ್ಲಿ ತಿರುಗಾಡಲು ಅಲ್ಲ, ಜಿಲ್ಲೆಯ ಜನರಿಗೆ ಈಗ ಕುಡಿಯುವ ನೀರಿಲ್ಲ, ಮೊದಲು ಎತ್ತಿನಹೊಳೆ ವಿರೋಧಿಸಿ ವಿಧಾನಸಭೆಯಲ್ಲಿ ಧರಣಿ ಮಾಡಿ, ಇಲ್ಲವಾದರೆ ರಾಜಿನಾಮೆ ಕೊಟ್ಟು ಅಮರನಾಂತ ಉಪವಾಸ ಕುಳಿತುಕೊಳ್ಳಿ’ ಆಗ ನೀವು ನಿಜವಾದ ಜನಸೇವಕರು ಎಂಬುದನ್ನು ಸಾಬೀತುಪಡಿಸಿ ಎಂದು ಸಂದೇಶ ಹಾಕಿದ್ದಾರೆ.

ಆ ಬ್ಯಾನರ್‌ಗಳ ಪಕ್ಕದಲ್ಲಿ ಇನ್ನೊಂದು ಬ್ಯಾನರ್‌ನಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಎತ್ತಿನಹೊಳೆ ಯೋಜನೆ ಬೆಂಬಲಿಸಿದ ದ.ಕ. ಜಿಲ್ಲೆಯವರಾದ ಡಾ. ಎಂ. ವೀರಪ್ಪ ಮೊಯ್ಲಿ ಹಾಗೂ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರ ಫೊಟೊ ಹಾಕಿ ‘13 ಸಾವಿರ ಕೋಟಿ ರೂ. ಯೋಜನೆಯ ಕಮಿಷನ್ ಆಸೆಗೆ ಜಿಲ್ಲೆಯ ಜೀವನದಿಯನ್ನು ಸರ್ವನಾಶ ಮಾಡಿ, ಜನರೀಗ ಟಾಯ್ಲೆಟ್, ಚರಂಡಿ ನೀರು ಶುದ್ಧೀಕರಿಸಿ ಕುಡಿಯುವಂತೆ ಮಾಡಿದ ಮೊಯ್ಲಿ ಹಾಗೂ ಡಿ.ವಿ ಸದಾನಂದ ಗೌಡರಿಗೆ ನಿದ್ದೆಯಲ್ಲಿರುವ ಜಿಲ್ಲೆಯ ಪ್ರಜೆಗಳಿಂದ ಹಾರ್ದಿಕ ಸ್ವಾಗತ ಎಂದು ವ್ಯಂಗ್ಯ ಮಾಡಿ ಬರಹ ಹಾಕಲಾಗಿದೆ.

ಕರಾವಳಿಯ ನೀರಿನ ಸಮಸ್ಯೆಗೆ ಕಾರಣಕರ್ತರಾದ ಜನಪ್ರತಿನಿಧಿಗಳಿಗೆ ಸಂದೇಶ ನೀಡುವ ಈ ಬ್ಯಾನರ್‌ನ್ನು ತೆಗೆಯುವಂತಿಲ್ಲ. ಒಂದು ವೇಳೆ ತೆಗೆಯುವುದಾದರೆ ‘ನಗರದಲ್ಲಿರುವ ಅನಧಿಕೃತ ಫ್ಲೆಕ್ಸ್ ಮೊದಲು ತೆರವು ಮಾಡಿ. ಆ ಬ್ಯಾನರ್‌ಗಳನ್ನು ತೆರವು ಮಾಡದೆ ಎತ್ತಿನಹೊಳೆ ಕುರಿತು ಅಳವಡಿಸಿರುವ ಭಿತ್ತಿಪತ್ರಗಳನ್ನು ತೆರವುಗೊಳಿಸಿದರೆ ಎಚ್ಚರಿಕೆ…. ಎಂದು ಮಂಗಳೂರು ಮಹಾನಗರಪಾಲಿಗೆ ಅಧಿಕಾರಿಗಳಿಗೂ ಎಚ್ಚರಿಕೆ ನೀಡಿದ್ದಾರೆ.

ಮಂಗಳೂರಿನಲ್ಲಿ ಕಾಣಸಿಗಲಿದೆ ವಾಟರ್ ಪಾಲಿಟಿಕ್ಸ್

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಗೆ ಕುಡಿಯುವ ನೀರು ಪೂರೈಕೆಯಾಗುವ ತುಂಬೆ ಡ್ಯಾಮ್‌ನಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ. ಇದನ್ನು ಗಮನಿಸಿ ಜಿಲ್ಲಾಡಳಿತ ರೇಶನಿಂಗ್ ಮೂಲಕ ನೀರು ಪೂರೈಕೆ ಆರಂಭಿಸಿತ್ತು.

ಇಲ್ಲಿಯ ಜನಪ್ರತಿನಿಧಿಗಳು ಡ್ಯಾಮ್ ವೀಕ್ಷಿಸಿ, ತುಂಬಾ ನೀರಿದೆ ಎಂದು ಹೇಳಿ, ರೇಶನಿಂಗ್ ನಿಲ್ಲಿಸಲು ಒತ್ತಡ ತಂದರು. ನೀರಿನ ಸೋರಿಕೆ, ಪೋಲು, ದುರ್ಬಳಕೆ ತಡೆದು, ಮಿತ ವ್ಯಯ ಮಾಡಲು ಹೇಳಿ, ಬದಲಿ ವ್ಯವಸ್ಥೆಗೆ ಸಲಹೆ ಮಾಡಬೇಕಾದ ಜನಪ್ರತಿನಿಧಿಗಳು ಪ್ರತಿಪಕ್ಷದವರ ಮಾದರಿಯಲ್ಲಿ ಆರೋಪ- ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ.

ಮಂಗಳೂರು ಸಹಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುವ ಲಕ್ಷಣ ಕಾ ಣಿಸುತ್ತಿಲ್ಲ. ನಗರ ಮಾತ್ರವಲ್ಲ, ಗ್ರಾಮೀಣ ಪ್ರದೇಶಗಳಲ್ಲೂ ನೀರಿನ ತೀವ್ರ ಸಮಸ್ಯೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತೆ ರೇಶನಿಂಗ್ ಆರಂಭಿಸಿದೆ.

ಮತ್ತೆ ರೇಶನಿಂಗ್: ಮೇ 1ರ ಬೆಳಗ್ಗೆ 6 ಗಂಟೆಯಿಂದ ಮೇ 3ರ ಬೆಳಗ್ಗೆ 6 ಗಂಟೆಯ ವರೆಗಿನ 48 ತಾಸುಗಳ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ.
ಮೇ 3ರ ಬೆಳಗ್ಗೆ 6 ಗಂಟೆಯಿಂದ ಮೇ 7ರ ಬೆಳಗ್ಗೆ 6 ಗಂಟೆ ವರೆಗಿನ 96 ಗಂಟೆ ನೀರು ಸರಬರಾಜು ನಡೆಯಲಿದೆ. ಮೇ 7ರ ಬೆಳಗ್ಗೆ 6ರಿಂದ ಮೇ 9ರ ತನಕ ಬೆಳಗ್ಗೆ 6ರ ತನಕ 48 ಗಂಟೆ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ.
ಮೇ 9ರ ಬೆಳಗ್ಗೆ 6ರಿಂದ ಮೇ 13ರ ಬೆಳಗ್ಗೆ 6ರ ತನಕ 96 ಗಂಟೆ ಕಾಲ ನೀರು ಪೂರೈಕೆ ನಡೆಯಲಿದೆ. ಮೇ 13ರ ಬೆಳಗ್ಗೆ 6ರಿಂದ ಮೇ 15ರ ಬೆಳಗ್ಗೆ 6ರ ತನಕ 48 ಗಂಟೆ ಕಾಲ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ. ಮೇ 15ರ ಬೆಳಗ್ಗೆ 6ರಿಂದ ಮೇ 19ರ ಬೆಳಗ್ಗೆ 6 ಗಂಟೆ ತನಕ 96 ಗಂಟೆ ನೀರು ಪೂರೈಕೆ ನಡೆಯಲಿದೆ. ಮೇ 19ರ ಬೆಳಗ್ಗೆ 6ರಿಂದ ಮೇ 21ರ ಬೆಳಗ್ಗೆ 6 ಗಂಟೆ ತನಕ 48 ಗಂಟೆ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ.