Tagged: sharade

ಕುಡ್ಲದಲ್ಲಿ ಹಸಿರು ಶಾರದೆಯ ಸೊಬಗು

ಹಸಿರು ಶಾರದೆ ಎನ್ನುವ ಕಲ್ಪನೆಯೇ ಬಹಳ ಅಪರೂಪ. ಜಾಗತಿಕ ಮಟ್ಟದಲ್ಲಿ ಹಸಿರು ಉಳಿಸಲು ಹೋರಾಟ ನಡೆಯುತ್ತಿದ್ದಾಗ ಮಂಗಳೂರಿನ ಪಡೀಲ್ ಕರ್ಮಾರ್‌ನಲ್ಲಿ ಸಾರ್ವಜನಿಕ ಶಾರದೋತ್ಸವ ಸಮಿತಿಯವರು ಈ ಬಾರಿ ತಮ್ಮ ಶಾರದೆ ಮಾತೆಯನ್ನು ಹಸಿರೀಕರಣದ ಮೂಲಕ ಅಭಿವ್ಯಕ್ತಗೊಳಿಸಿದ್ದಾರೆ.
ಶಾರದಾ ಮಾತೆಯ ಮೂರ್ತಿಯ ಅಸುಪಾಸಿನಲ್ಲಿ ವಿಶೇಷವಾದ ಗಿಡಗಳನ್ನು ಇಡುವ ಜತೆಯಲ್ಲಿ ಭಕ್ತರಿಗೂ ಹಸಿರಿನ ಕುರಿತು ಜಾಗೃತಿ, ಮಾಹಿತಿಯನ್ನು ನೀಡುವ ಕೆಲಸ ಮಾಡುತ್ತಿದ್ದಾರೆ. ಪೂರ್ತಿಯಾಗಿ ಶಾರದಾ ಮಾತೆಯ ವೇದಿಕೆಯ ತುಂಬಾ ಹಸಿರಿನ ತೋರಣ, ಚಪ್ಪರ ಎಲ್ಲವೂ ಭಕ್ತರಿಗೆ ಹೊಸ ಅನುಭವವನ್ನು ನೀಡಬಲ್ಲದು.