Tagged: udupi

ಚಂದ್ರನ ಅಂಗಳದ ಸಾಹಸದಲ್ಲಿ ಕಾರ್ಲದ ವಿಜ್ಞಾನಿ

ಚಂದ್ರನ ಅಂಗಳಕ್ಕೆ ವಿಕ್ರಂ ಲ್ಯಾಡರ್ ನ ಸಾಹಸದಲ್ಲಿ‌ ಇಸ್ರೋದ ವಿಜ್ಞಾನಿಗಳ ಸಾಲಿನಲ್ಲಿ ಕಾರ್ಲದ ಮೂಲದ ವಿಜ್ಞಾನಿ ವೈ.ದೇವದಾಸ್ ಶೆಣೈ ಕೂಡ ಒಬ್ಬರು. ಅವರು ಸರಕಾರಿ ಶಾಲೆಯಲ್ಲಿ ಓದಿದವರು. ಪೆರುವಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದಿಕೊಂಡು ಈಗ ಇಸ್ರೋದ ವಿಜ್ಞಾನಿಗಳ ಸಾಲಿನಲ್ಲಿ ನಿಂತಿರೋದು ಹೆಮ್ಮೆಯ ವಿಚಾರ.

ಅಷ್ಟಮಿಗೆ ಮಕ್ಕಳ ಪಾಲಿನ ದೇವರಾದ ರವಿಯಣ್ಣ

ಕಟಪಾಡಿಯ ಸಾಮಾನ್ಯ ಒಬ್ಬ ಗಾರೆ ಕೆಲಸದ ರವಿಯಣ್ಣ ಜಾಸ್ತಿ ಓದಿದವರಲ್ಲ ದೊಡ್ಡ ಹೇಳಿಕೊಳ್ಳುವ ಕೆಲಸನೂ ಇಲ್ಲ ಆದರೆ ಕಳೆದ ಐದು ವರ್ಷದಲ್ಲಿ ಅಷ್ಟಮಿಯಲ್ಲಿ ಭಿನ್ನವಾದ ವೇಷ ಹಾಕಿಕೊಂಡು ಅನಾರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆ ಗೆ ನೆರವಾಗುವ ವಿಚಾರ ಇದೆಯಲ್ಲ ಅದು ಎಂದಿಗೂ ಸಣ್ಣ ಮಾತೇ ಅಲ್ಲ. ಈ ಬಾರಿ ದೀ ವ್ಯಾಂಪರ್ಸ್ ವೇಷದಲ್ಲಿ ಉಡುಪಿಯಲ್ಲಿ ಎರಡು ದಿನ ಕಾಣಿಸಿಕೊಳ್ಳಲಿದ್ದಾರೆ ಅವರಿಗೆ ಬೆನ್ನು ತಟ್ಟುವ ಕೆಲಸ ವಾಗಲಿ.

ಕಳೆದ ಐದು ವರ್ಷಗಳಲ್ಲಿ ಸಂಗ್ರಹಿಸಿದ ಒಟ್ಟು 35ಲಕ್ಷ ರೂ. ಹಣವನ್ನು 29 ಬಡ ಮಕ್ಕಳ ಚಿಕಿತ್ಸೆಗೆ ನೀಡಲಾಗಿದೆ. ಅದೇ ರೀತಿ ಈ ವರ್ಷವೂ ಕೂಡ ರವಿ ಮತ್ತು ಫ್ರೆಂಡ್ಸ್ ಕಟಪಾಡಿ ತಂಡ ಆ ಕಾರ್ಯ ಕ್ಕೆ ಮುಂದಾಗುತ್ತಿದೆ. ಲೀವರ್ ಕ್ಯಾನ್ಸರ್ನಿಂದ ಬಳಲುತ್ತಿರುವ ಮಂದರ್ತಿ ಮೂಡುಬಾರಳಿಯ ಕುಶಲ ಮತ್ತು ಉಷಾ ದಂಪತಿಯ ಮಗ ಶ್ರೀತನ್(3), ಬಳಿರಕ್ತ ಕಣ ಉತ್ಪತ್ತಿ ಯಾಗದ ಕಾಯಿಲೆಯಿಂದ ಬಳಲುತ್ತಿರುವ ಕುಂದಾಪುರ ವಕ್ವಾಡಿಯ ರವೀಂದ್ರ ಮತ್ತು ಯಶೋಧ ದಂಪತಿಯ ಮಗ ಪ್ರಥಮ್(5), ಮೆದಳಿನ ರಕ್ತಸ್ರಾವ ಕಾಯಿಲೆಗೆ ತುತ್ತಾಗಿರುವ ಹಿರಿಯಡಕ ಪಂಚನಬೆಟ್ಟು ಕೃಷ್ಣಮೂರ್ತಿ ಆಚಾರ್ಯ ಮತ್ತು ಕುಶಲ ದಂಪತಿಯ ಮಗ ಕಿರಣ್(18) ಸೇರಿದಂತೆ ಐದು ಮಕ್ಕಳ ಚಿಕಿತ್ಸೆ ಸಹಾಯ ಮಾಡಲಾಗುತ್ತದೆ. ಸಂಗ್ರಹವಾದ ಹಣವನ್ನು ಸೆ.3ರಂದು ಸಂಜೆ 5ಗಂಟೆಗೆ ಕಟಪಾಡಿ ಸಾರ್ವ ಜನಿಕ ಶ್ರೀಗಣೇಶೋತ್ಸವ ವೇದಿಕೆ ಯಲ್ಲಿ‌‌ ನೀಡಲಾಗುತ್ತದೆ.

ಮಂಗಳೂರು,ಪುಣೆ, ಕಾಸರಗೋಡು: ಕೆಎಸ್ಸಾರ್ಟಿಸಿ ಅಂಬಾರಿ

ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದಿಂದ ಮಂಗಳೂರು-ಪುಣೆ ನಡುವೆ ಸೇವೆ ಆರಂಭಿಸಲಿರುವ ‘ಅಂಬಾರಿ ಡ್ರೀಮ್ ಕ್ಲಾಸ್ ಮಲ್ಲಿ ಆಕ್ಸ್‌ಲ್ ಎಸಿ ಸ್ಲೀಪರ್’ ಹಾಗೂ ಮಂಗಳೂರು- ಕಾಸರಗೋಡು ನಡುವೆ ನೂತನ ವೋಲ್ವೊ ಬಸ್‌ಗೆ ಚಾಲನೆ ಸಿಕ್ಕಿದೆ.

ಮಂಗಳೂರು ವಿಭಾಗದಲ್ಲಿ ಇದೇ ಮೊದಲ ಬಾರಿಗೆ 14.2ಮೀಟರ್ ಉದ್ದದ ವೋಲ್ವೊ ಸ್ಲೀಪರ್ ಗಾಡಿ ಪುಣೆಗೆ ಪ್ರಯಾಣ ಬೆಳೆಸಲಿದೆ. ಮಂಗಳೂರಿನಿಂದ ಪುಣೆಗೆ ತೆರಳುವ ಬಸ್ ಉಡುಪಿ, ಭಟ್ಕಳ, ಹೊನ್ನಾವರ, ಅಂಕೋಲ ಮಾರ್ಗವಾಗಿ ಸಂಚರಿಸುತ್ತದೆ. ಪ್ರತೀ ಒಬ್ಬ ಪ್ರಯಾಣಿಕರಿಗೆ 1350 ರೂ. ಪ್ರಯಾಣದರ ನಿಗದಿಪಡಿಸಲಾಗಿದೆ. ಪ್ರತೀ ದಿನ ಸಂಜೆ 4 ಗಂಟೆಗೆ ಮಂಗಳೂರಿನಿಂದ ಹೊರಡಲಿದ್ದು, ಮರುದಿನ ಬೆಳಗ್ಗೆ 6.45 ಕ್ಕೆ ಪುಣೆ ತಲುಪಲಿದೆ. ಪುಣೆಯಿಂದ ಸಂಜೆ 6.30 ಗೆ ಹೊರಡುವ ಬಸ್ಸು ಮರುದಿನ ಬೆಳಗ್ಗೆ 9.15ಕ್ಕೆ ಮಂಗಳೂರು ತಲುಪಲಿದೆ .

ಅಂಬಾರಿ ವೈಶಿಷ್ಟ್ಯ: ಅಂಬಾರಿ ಡ್ರೀಮ್ ಮಲ್ಟಿ ಆಕ್ಸ್‌ಲ್ ಎಸಿ ಸ್ಲೀಪರ್ ಬಸ್ ಹಲವಾರು ವೈಶಿಷ್ಟ್ಯತೆಗಳನ್ನು ಹೊಂದಿದೆ. ಆರಾಮದಾಯಕ ಪ್ರಯಾಣ, ಸುಲಭ ಚಾಲನೆಗಾಗಿ ವಿದ್ಯುನ್ಮಾನ ನಿಯಂತ್ರಿತ ಸಸ್ಪೆನ್ಷನ್ಸ್, ಆಕರ್ಷಕ ಹಾಗೂ ಮೋಹಕ ಒಳಾಂಗಣ ವಿನ್ಯಾಸ, ವಿಸ್ತಾರವಾದ ಸ್ಥಳಾವಕಾಶ, ಪ್ರತ್ಯೇಕ ಮೊಬಲ್ ಚಾರ್ಜಿಂಗ್ ಪಾಯಿಂಟ್ಸ್, ನೀರಿನ ಬಾಟಲಿಗಳಿಗಾಗಿ ಸ್ಥಳ, ವಿಶಾಲ ಕಿಟಕಿ, ಮೇಲ್ಛಾವಣಿ ಕಿಟಕಿ ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ತುರ್ತು ನಿರ್ಗಮನ ಬಾಗಿಲುಗಳು, ಅಗ್ನಿ ಅನಾಹುತ ತಪ್ಪಿಸಲು ಫಯರ್ ಡಿಟೆಕ್ಷನ್ ಮತ್ತು ಸಪ್ರೆಶನ್ ಸಿಸ್ಟಮ್‌ಗಳ ಜೋಡಣೆ, ಶಕ್ತಿಯುತ ಮತ್ತು ಪರಿಣಾಮಕಾರಿ ಹವಾನಿಯಂತ್ರಕಗಳನ್ನು ಹೊಂದಿದೆ.

ವೇಳಾಪಟ್ಟಿ: ಮಂಗಳೂರಿನಿಂದ ಕಾಸರಗೋಡಿಗೆ ಮೊದಲ ಹಂತದಲ್ಲಿ ಎರಡು ಎಸಿ ವೋಲ್ವೊ ಬಸ್ ಕಾರ್ಯಾಚರಣೆ ಮಾಡಲಿದೆ. ಬೆಳಗ್ಗೆ 7 ಗಂಟೆ, 7.30, 7.45, 8, 10, 10.30, 10.45, 11.15, 2, 2.30, 2.45, 3.15, 6, 6.30ಕ್ಕೆ ಮತ್ತು ಕಾಸರಗೋಡಿನಿಂದ ಬೆಳಗ್ಗೆ 5.30, 5.55, 8.30, 9, 9.15, 9.45, 12, 12.30, 1, 1.30, 4.15, 4.45, 5.15 ಮತ್ತು 5.30ಕ್ಕೆ ಬಸ್ ಸಂಚರಿಸಲಿದೆ. ಮಂಗಳೂರಿನಿಂದ ಕಾಸರಗೋಡಿಗೆ ಕೇವಲ ಆರು ನಿಲುಗಡೆಯೊಂದಿಗೆ ಎರಡೂ ವಿಭಾಗದಿಂದ ಪ್ರತೀ ದಿನ 14ಟ್ರಿಪ್ ಎಸಿ ವೋಲ್ವೊ ಬಸ್ ಸಂಚರಿಸಲಿದ್ದು, ಪ್ರಯಾಣಿಕರೊಬ್ಬರಿಗೆ 75 ರೂ. ದರ ನಿಗದಿಪಡಿಸಲಾಗಿದೆ. ದಿನದ ಪಾಸಿಗೆ 130 ರೂ. ದರ ನಿಗದಿಪಡಿಸಲಾಗಿದ್ದು, ದಿನದಲ್ಲಿ ಎರಡು ಬಾರಿ ಪ್ರಯಾಣ ಮಾಡಬಹುದಾಗಿದೆ.

ಕರಾವಳಿಯ ನಾಗರಾಧನೆ ವಿಶ್ವಕ್ಕೆ ಮಾದರಿ

ಇಡೀ ಜಗತ್ತಿನ ಯಾವುದೇ ಮೂಲೆಗೆ ಹೋದರೂ ಕೂಡ ಕರಾವಳಿಯಲ್ಲಿರುವಷ್ಟು ನಾಗನ ಆರಾಧಿಸುವ ಜನ ಬೇರೆ ಎಲ್ಲೂ ಕಾಣ ಸಿಗೋದಿಲ್ಲ.
ಇಡೀ ವಿಶ್ವದ ಜನವೇ ನಾಗನ ನಿಜವಾದ ಆರಾಧನೆ ಮಾಡಬೇಕಾದರೆ ಕರಾವಳಿಗೆ ಬರಲೇಬೇಕು. ಇಲ್ಲಿನ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನ, ಕುಡುಪು ದೇವಸ್ಥಾನ ಹೀಗೆ ಉಡುಪಿ, ಕಾಸರಗೋಡಿನಲ್ಲಿ ಇಂತಹ ನಾಗನ ಆರಾಧನೆ ಸಿಮೀತವಾದ ದೇವಸ್ಥಾನಗಳು ಬೇಕಾದಷ್ಟು ಸಂಖ್ಯೆಯಲ್ಲಿ ಕಾಣಸಿಗುತ್ತದೆ.
ನಾಗಮಂಡಲ, ಡಕ್ಕೆಬಲಿ, ಸರ್ಪಂಕಳ ಹಾಗೂ ಕಾಡ್ಯನಾಟ ಎಂಬ ಆಚರಣೆಗಳು ನಾಗಾರಾಧನೆಯ ವೈವಿಧ್ಯತೆಯನ್ನು ಪರಿಚಯಿಸುತ್ತದೆ ಎನ್ನುವುದು ವಿಶೇಷ.

ಕುಡ್ಲದ ಹೆಣ್ಣು ಪಿಲಿ ಸುಷ್ಮಾ ರಾಜ್

ಕರಾವಳಿಯ ಹುಲಿವೇಷ ಸಮಯದಲ್ಲಿ ಹುಲಿವೇಷ ಹಾಕೋದು ಬರೀ ಪುರುಷರು ಮಾತ್ರ ಎನ್ನುವ ಲೆಕ್ಕಚಾರವನ್ನು ಬುಡಮೇಲು ಮಾಡಿದ ಹುಡುಗಿ ಎಂದರೆ ಸುಷ್ಮಾ ರಾಜ್. ಅವರನ್ನು ಕರಾವಳಿಯ ಹೆಣ್ಣು ಹುಲಿ ಎಂದೇ ಕರೆಯಲಾಗುತ್ತದೆ ಸಾಕಷ್ಟು ಸಿನಿಮಾದಲ್ಲೂ ಅವರು ಕಾಣಿಸಿಕೊಂಡಿದ್ದಾರೆ.
ಮುಖ್ಯವಾಗಿ ಮಂಗಳೂರಿನಲ್ಲಿ ನಡೆಯುವ ದಸರಾದಲ್ಲೂ ಅವರ ಹುಲಿವೇಷ ಬೊಂಬಾಟ್ ಆಗಿರುತ್ತದೆ. ಉಡುಪಿಯ ಕಲಾವಿದ ಅಶೋಕ್ ರಾಜ್ ಮತ್ತು ರಾಧಾ ದಂಪತಿಗಳ ಕಿರಿಯ ಪುತ್ರಿ. ಹುಲಿವೇಷದತ್ತ ಸುಷ್ಮಾಗೆ ಬಾಲ್ಯದಿಂದಲೂ ಆಸಕ್ತಿ. ಕಾರಣ, ಅಪ್ಪ ಸುಮಾರು ಮೂವತ್ತು ವರುಷಗಳಿಂದ ಹುಲಿವೇಷ ಕುಣಿತದ ಕಲಾವಿದರಿಗೆ ತರಬೇತಿ ನೀಡುತ್ತಿದ್ದಾರೆ.