Tagged: waste

ಕುಡ್ಲದ ಹುಡುಗನ ಬಿಸಿನೀರಿನಲ್ಲಿ ಕರಗುವ ಪ್ಲಾಸ್ಟಿಕ್

ಪ್ಲಾಸ್ಟಿಕ್ ಎಂದಾದರೂ ಬಿಸಿನೀರಿನಲ್ಲಿ ಕರಗುತ್ತಾ….ಎಲ್ಲಾದರೂ ಕರಗಿದರು ಅದನ್ನು ನೀರಿನಂತೆ ಕುಡಿಯಬಹುದಾ…? ಈ ಎರಡು ಪ್ರಶ್ನೆಗಳನ್ನು ಕೇಳುವ ಮಂದಿಗೆ ಮಂಡೆ ಸರಿಯಿಲ್ಲ ಎಂದು‌ ನೀವು ಭಾವಿಸಿಕೊಂಡರೆ ಅದು ನಿಮ್ಮ ತಪ್ಪು ಅಭಿಪ್ರಾಯ.

ಹೌದು. ಕುಡ್ಲ ಬಟ್ ಬೇಸಿಕಲಿ ಬೆಳ್ತಂಗಡಿ ಯ ಬಳ್ಳಂಜದ ಯುವ ಉದ್ಯಮಿ ಅಶ್ವಥ್ ಹೆಗ್ಡೆ ಅವರ ಎನ್ವೀ ಗ್ರೀನ್ ಎನ್ನುವ ಪ್ಲಾಸ್ಟಿಕ್ ಬಿಸಿ ನೀರಿನಲ್ಲಿ ಕರಗುತ್ತೆ ಜತೆಗೆ ಅದನ್ನು‌ಕುಡಿದರೂ ಏನೂ ಆಗೋಲ್ಲ. ಕಾರಣ ಇದು ತರಕಾರಿ ತ್ಯಾಜ್ಯ ದಿಂದ ಮಾಡಿದ ಪ್ಲಾಸ್ಟಿಕ್. ಇತರ ಪ್ಲಾಸ್ಟಿಕ್ ಗೆ ಹೋಲಿಕೆ ಮಾಡಿದರೆ ರೇಟು ಮಾತ್ರ ಜಾಸ್ತಿ ಆದರೆ ಪರಿಸರಕ್ಕೆ ಈ ಪ್ಲಾಸ್ಟಿಕ್ ಪೂರಕವಾಗಿದೆ. ಮಂಗಳೂರಿನ ಮೀನು ಮಾರಾಟದ ಮಹಿಳೆಯೊಬ್ಬರು ನೀಡಿದ ಅಭಿಪ್ರಾಯ ಈಗ ಈ ಪ್ಲಾಸ್ಟಿಕ್ ರೂಪುಗೊಳ್ಳಲು ಕಾರಣವಾಯಿತು ಎನ್ನುವುದು ಅಶ್ವಥ್ ಅವರ ಮಾತು.

ಶಾಸಕರ ಐಡಿಯಾಕ್ಕೆ ಭೇಶ್ ಎಂದ ಸ್ವಿಗ್ಗಿ

ನಮ್ಮ ಕುಡ್ಲ ಸಿಟಿ ಬೆಳೆಯುತ್ತಿದೆ. ಅದರಲ್ಲೂ ಈ ಬೆಳವಣಿಗೆಯ ಜತೆಗೆ ಪ್ಲಾಸ್ಟಿಕ್ ವಸ್ತುಗಳ ಬಳಕೆ ದಿನನಿತ್ಯ ಏರಿಕೆಯಾಗುತ್ತಿದೆ. ಆಹಾರದಲ್ಲೂ ಪ್ಲಾಸ್ಟಿಕ್ ಲಕೋಟೆ(ಬ್ಯಾಗ್)ಗಳ ಪ್ರಮಾಣ ಏರಿಕೆಯಾಗುತ್ತಿದೆ.
ಮಂಗಳೂರಿನ ಫುಡ್ ಡೆಲಿವರಿ ಸಿಸ್ಟಂ ಕೂಡ ಅಷ್ಟೇ ವೇಗವಾಗಿ ಓಡುತ್ತಿದೆ. ಇಂತಹ ಸಮಯದಲ್ಲಿ ಫುಡ್ ಡೆಲಿವರಿಯಲ್ಲಿ ಕರಾವಳಿಯಲ್ಲಿ ಹೇರಳವಾಗಿ ಸಿಗುವ ಬಾಳೆ ಎಳೆಯನ್ನು ಬಳಸಿಕೊಳ್ಳುವಂತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಮಾಹಿತಿ ಹಂಚುವ ಕಾರ‍್ಯ ಮಾಡಿದ್ದರು.
ಇದಕ್ಕೆ ಸ್ವಿಗ್ಗಿ ಫುಡ್ ಡೆಲಿವರಿ ಕಂಪನಿ ಕೂಡ ಈ ಕುರಿತು ಪಾಸಿಟಿವ್ ಅಭಿಪ್ರಾಯವನ್ನು ನೀಡುವ ಜತೆಗೆ ಮುಂದಿನ ದಿನಗಳಲ್ಲಿ ತಮ್ಮ ಪಾಲುದಾರ ಹೋಟೆಲ್‌ಗಳ ಜತೆಗೆ ಕಂಪನಿ ಕೂಡ ಈ ಕುರಿತು ಚಿಂತನೆ ನಡೆಸುತ್ತದೆ ಎನ್ನುವ ಅಭಿಪ್ರಾಯ ತಾಳಿದೆ.