Tagged: water

ತಾಮ್ರದ ಪಾತ್ರೆಯಲ್ಲಿ ನೀರು ಕುಡಿದ್ರೆ ಆರೋಗ್ಯಕ್ಕೆ ಒಳ್ಳೆಯದು !

ತಾಮ್ರದ ಪಾತ್ರೆಯಲ್ಲಿ ನೀರು ಕುಡಿಯೋದು ಹಳೇ ಕಾಲದ ಪದ್ಧತಿ. ಆಯುರ್ವೇದದಲ್ಲೂ ಇದರ ಉಲ್ಲೇಖವಿದೆ. ಈ ಹಳೆ ಕಾಲದ ಪದ್ಧತಿಯಿಂದಲೇ ಬೆರಗಾಗುವಂಥ ಆರೋಗ್ಯಕರ ಪರಿಣಾಮಗಳಿವೆ.
ತಾಮ್ರದ ಪಾತ್ರೆಯಲ್ಲಿ ನೀರನ್ನು ಹಾಕಿ 8 ಗಂಟೆಗಳ ಬಳಿಕ ಕುಡಿಯಬೇಕು. ಇದರಿಂದ ವಾತ, ಕಫ, ಪಿತ್ತ ನಿವಾರಣೆಯಾಗುತ್ತದೆ. ಸೋಂಕು ನಿವಾರಕವಾಗಿ ಕೆಲಸ ಮಾಡುತ್ತದೆ. ಅತಿಸಾರ, ಭೇದಿ, ಕಾಮಾಲೆ ವಿರುದ್ಧವೂ ಹೋರಾಡುತ್ತದೆ.ತಾಮ್ರ ಜೀರ್ಣಕ್ರಿಯೆಗೆ ಸಹಕಾರಿ. ತಾಮ್ರದ ಪಾತ್ರೆಯಲ್ಲಿನ ನೀರು ಕುಡಿದರೆ ಜೀರ್ಣಕ್ರಿಯೆ ಸರಾಗವಾಗಿ ಆಗುತ್ತದೆ.
ತಾಮ್ರ ಕ್ಯಾನ್ಸರ್ ಹಾಗೂ ಅಧಿಕ ರಕ್ತದೊತ್ತಡ ತಡೆಗೂ ಉತ್ತಮ.ತಾಮ್ರ ಚರ್ಮ ಸುಕ್ಕುಗಟ್ಟುವುದನ್ನು ತಡೆಯುತ್ತದೆ. ಇದರಿಂದ ವಯಸ್ಸಾದಂತೆ ಕಾಣುವುದನ್ನು ತಡೆಯಬಹುದು.ತಾಮ್ರದ ಪಾತ್ರೆಯಲ್ಲಿನ ನೀರನ್ನು ದಿನವೂ ಕುಡಿದಲ್ಲಿ ಇದು ಥೈರಾಯ್ಡ್ ಗ್ರಂಥಿಯನ್ನು ನಿಯಂತ್ರಿಸುತ್ತದೆ.
ತಾಮ್ರ ರಕ್ತಹೀನತೆಯನ್ನೂ ತಡೆಯುತ್ತದೆ.ದೇಹದಲ್ಲಿನ ಕೊಬ್ಬನ್ನು ಕರಗಿಸಲೂ ತಾಮ್ರ ಸಹಕಾರಿ. ಹೀಗಾಗಿ ತಾಮ್ರ ಉಪಯೋಗಿಸುವಿಕೆಯಿಂದ ತೂಕವೂ ಇಳಿಯುತ್ತದೆ. ತಾಮ್ರದಲ್ಲಿ ನಂಜುನಿರೋಧಕ ಗುಣಗಳಿದ್ದು ಇದು ಗಾಯಗಳನ್ನು ಗುಣಪಡಿಸುವಲ್ಲಿ ಸಹಕಾರಿ.

ಕುಡ್ಲದ ಹುಡುಗನ ಬಿಸಿನೀರಿನಲ್ಲಿ ಕರಗುವ ಪ್ಲಾಸ್ಟಿಕ್

ಪ್ಲಾಸ್ಟಿಕ್ ಎಂದಾದರೂ ಬಿಸಿನೀರಿನಲ್ಲಿ ಕರಗುತ್ತಾ….ಎಲ್ಲಾದರೂ ಕರಗಿದರು ಅದನ್ನು ನೀರಿನಂತೆ ಕುಡಿಯಬಹುದಾ…? ಈ ಎರಡು ಪ್ರಶ್ನೆಗಳನ್ನು ಕೇಳುವ ಮಂದಿಗೆ ಮಂಡೆ ಸರಿಯಿಲ್ಲ ಎಂದು‌ ನೀವು ಭಾವಿಸಿಕೊಂಡರೆ ಅದು ನಿಮ್ಮ ತಪ್ಪು ಅಭಿಪ್ರಾಯ.

ಹೌದು. ಕುಡ್ಲ ಬಟ್ ಬೇಸಿಕಲಿ ಬೆಳ್ತಂಗಡಿ ಯ ಬಳ್ಳಂಜದ ಯುವ ಉದ್ಯಮಿ ಅಶ್ವಥ್ ಹೆಗ್ಡೆ ಅವರ ಎನ್ವೀ ಗ್ರೀನ್ ಎನ್ನುವ ಪ್ಲಾಸ್ಟಿಕ್ ಬಿಸಿ ನೀರಿನಲ್ಲಿ ಕರಗುತ್ತೆ ಜತೆಗೆ ಅದನ್ನು‌ಕುಡಿದರೂ ಏನೂ ಆಗೋಲ್ಲ. ಕಾರಣ ಇದು ತರಕಾರಿ ತ್ಯಾಜ್ಯ ದಿಂದ ಮಾಡಿದ ಪ್ಲಾಸ್ಟಿಕ್. ಇತರ ಪ್ಲಾಸ್ಟಿಕ್ ಗೆ ಹೋಲಿಕೆ ಮಾಡಿದರೆ ರೇಟು ಮಾತ್ರ ಜಾಸ್ತಿ ಆದರೆ ಪರಿಸರಕ್ಕೆ ಈ ಪ್ಲಾಸ್ಟಿಕ್ ಪೂರಕವಾಗಿದೆ. ಮಂಗಳೂರಿನ ಮೀನು ಮಾರಾಟದ ಮಹಿಳೆಯೊಬ್ಬರು ನೀಡಿದ ಅಭಿಪ್ರಾಯ ಈಗ ಈ ಪ್ಲಾಸ್ಟಿಕ್ ರೂಪುಗೊಳ್ಳಲು ಕಾರಣವಾಯಿತು ಎನ್ನುವುದು ಅಶ್ವಥ್ ಅವರ ಮಾತು.

ದೇಶದಲ್ಲಿಯೇ ಅಪೂರ್ವ ಕುಡ್ಲದ ಮಳೆ ರಸ್ತೆ

ದೇಶದ ಯಾವುದೇ ನಗರದಲ್ಲೂ ಮಳೆ ಬಂದಾಗ ನೀರು ರಸ್ತೆಯ ಬದಿಯಲ್ಲಿರುವ ಚರಂಡಿ ಮೂಲಕ ಹರಿದು ಹೋಗುತ್ತದೆ. ಆದರೆ ಮಂಗಳೂರಿನಲ್ಲಿ ಮಾತ್ರ ಮಳೆ ನೀರು ರಸ್ತೆಯಲ್ಲೇ ಸಾಗುತ್ತದೆ. ಸ್ಮಾರ್ಟ್ ಸಿಟಿ ಮಂಗಳೂರು ಮಳೆ ರಸ್ತೆ ನೋಡುವುದು ಚೆಂದ ಸಮಸ್ಯೆಗಳು ಮಾತ್ರ ಬಹಳವಿದೆ.

ಕುಡ್ಲದಲ್ಲಿ ಮಳೆರಾಯನ ಆಟಕ್ಕೆ ರಸ್ತೆಯಲ್ಲ ತೋಡು

ಮಳೆರಾಯನ ಆಗಮನಕ್ಕೆ ಕಾದು ಕೂತಿದ್ದ ಕುಡ್ಲದ ಜನರು ಈಗ ಫುಲ್ ಚಂಡಿ ಮುದ್ದೆ ಆಗಿದ್ದಾರೆ. ಎರಡು ದಿನಗಳಿಂದ ನಿಧಾನವಾಗಿ ಇಳೆಗೆ ಬಂದ ಮಳೆರಾಯ ಪೂರ್ಣ ಪ್ರಮಾಣದಲ್ಲಿ ತನ್ನ ಕೆಲಸ ಆರಂಭ ಮಾಡಿದ್ಸಾನೆ. ವಿಶೇಷ ಎಂದರೆ ಮಳೆರಾಯನ ಆಗಮನದ ನಿರೀಕ್ಷೆ ಇಟ್ಟು ಕೊಳ್ಳ ದ ಸ್ಥಳೀಯ ಆಡಳಿತ ತನ್ನ ಕೆಲಸವನ್ನು ಪೂರ್ಣ ಗೊಳಿಸದೇ ಇರುವುದರಿಂದ ರಸ್ತೆ ಎಲ್ಲವೂ ತೋಡುಗಳಾಗಿ ಬದಲಾಗಿದೆ. ತೋಡುಗಳು ಪೂರ್ಣ ಪ್ರಮಾಣದಲ್ಲಿ ಹೂಳು ತೆಗೆಯದ ಪರಿಣಾಮ ಪೂರ್ತಿ ತುಂಬಿ ನೀರು ರಸ್ತೆಯಲ್ಲಿ ಹರಿದಾಡುತ್ತಿದೆ.

ಕುಡ್ಲದ ಪ್ರತಿಯೊಬ್ಬರು ಕೇಳುವ‌ ಮಾತು ಇಲ್ಲಡ್ ನೀರ್ ಉಂಡಾ?

ಕುಡ್ಲದ ಯಾವುದೇ ಮನೆ,ಕಚೇರಿ, ಹೋಟೆಲ್, ಬಸ್ ನಿಲ್ದಾಣ, ಮಾರುಕಟ್ಟೆ, ಮಾಲ್ ಎಲ್ಲಿ ಬೇಕಾದರೂ ಹೋಗಿ ಕೇಳುವ‌ ಮಾತು ಒಂದೇ ಇಲ್ಲಡ್ ನೀರ್ ಉಂಡಾ? ( ಮನೆಯಲ್ಲಿ ನೀರು ಉಂಟಾ), ಮನೆಗೆ ಸರಿಯಾಗಿ ನೀರು ಬರುತ್ತಾ, ಟ್ಯಾಂಕರ್ ನೀರು ತರಿಸುತ್ತಿರಾ? ಹೀಗೆ ಹತ್ತಾರು ಪ್ರಶ್ನೆಗಳನ್ನು ಕೇಳುವ ಮಂದಿ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಾ ಇದ್ದಾರೆ.